ಕೆಪಿಸಿಸಿ ಕರೋನಾ ಕಾರ್ಯಪಡೆ ಸಭೆ

338

ಬೆಂಗಳೂರು: ಕರೋನಾ ಸೋಂಕು ನಿಯಂತ್ರಿಸುವ ಸಲುವಾಗಿ ಕೆಪಿಸಿಸಿ ವತಿಯಿಂದ ಪರಿಸ್ಥಿತಿ ನಿರ್ವಹಣೆ ಪಡೆ ರಚನೆ ಮಾಡಲಾಗಿದೆ. ಕಾಂಗ್ರೆಸ್ ಕಾರ್ಯಪಡೆಯ ಮೊದಲ ಸಭೆ ಇಂದು ಬೆಳಗ್ಗೆ 11 ಗಂಟೆಗೆ ನಡೆಯಲಿದೆ.

ನಗರದ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಸಭೆ ನಡೆಸಲಾಗ್ತಿದೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಎಸ್.ಆರ್ ಪಾಟೀಲ, ಕೆಪಿಸಿಸಿ ಕಾರ್ಯಾಧ್ಯಕ್ಷರು, ಮಾಜಿ ಸ್ಪೀಕರ್ ರಮೇಶಕುಮಾರ, ಖಜಾಂಚಿ ಸಲೀಂ ಅಹ್ಮದ, ಕಾರ್ಯಪಡೆಯ ಮುಖ್ಯಸ್ಥರು ಸೇರಿದಂತೆ ಅನೇಕರು ಭಾಗವಹಿಸ್ತಿದ್ದಾರೆ.

ಈ ವೇಳೆ ರಾಜ್ಯದಲ್ಲಿ ಹೆಚ್ಚುತ್ತಿರುವ ಸೋಂಕಿತರ ಸಂಖ್ಯೆಯನ್ನ ನಿಯಂತ್ರಣ ಮಾಡುವ ನಿಟ್ಟಿನಲ್ಲಿ ಯಾವ ರೀತಿಯಾಗಿ ಕೆಲಸ ಮಾಡಬೇಕು. ಶಾಸಕರ ಕ್ಷೇತ್ರವಾರು ಹೇಗೆಲ್ಲ ನಿಗಾ ವಹಿಸಬೇಕು ಅನ್ನೋದು ಸೇರಿದಂತೆ ಅನೇಕ ವಿಚಾರಗಳ ಕುರಿತು ಚರ್ಚೆ ನಡೆಸಲಾಗುತ್ತೆ ಎಂದು ಹೇಳಲಾಗ್ತಿದೆ.




Leave a Reply

Your email address will not be published. Required fields are marked *

error: Content is protected !!