ಸಿಎಂಗೆ ಕರೋನಾ, ದೆಹಲಿ ಪ್ರವಾಸ ರದ್ದು

218

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ಕೋವಿಡ್ 19 ಸೋಂಕು ಕಾಣಿಸಿಕೊಂಡಿದೆ. ಈ ಬಗ್ಗೆ ಟ್ವೀಟರ್ ಮೂಲಕ ತಿಳಿಸಿದ್ದು, ತಮ್ಮ ಸಂಪರ್ಕಕ್ಕೆ ಬಂದವರೆಲ್ಲ ಕೋವಿಡ್ ಟೆಸ್ಟ್ ಮಾಡಿಸಿಕೊಳ್ಳಿ ಎಂದಿದ್ದಾರೆ.

ಸಿಎಂ ಇಂದು ದೆಹಲಿಗೆ ತೆರಳಬೇಕಿತ್ತು. ಆದರೆ, ಕೋವಿಡ್ ದೃಢಪಟ್ಟಿರುವುದರಿಂದ ದೆಹಲಿ ಪ್ರವಾಸ ರದ್ದುಗೊಳಿಸಲಾಗಿದೆ ಎಂದಿದ್ದಾರೆ. ಪ್ರಧಾನಿ ಕಾರ್ಯಕ್ರಮದಲ್ಲಿ ಭಾಗಿಯಾಗಲು 48 ಗಂಟೆ ಮೊದಲೇ ಕೋವಿಡ್ ಟೆಸ್ಟ್ ಮಾಡಿಸಬೇಕಿತ್ತು. ಹೀಗಾಗಿ ಟೆಸ್ಟ್ ಮಾಡಿಸಿದಾಗ ಕೋವಿಡ್ ದೃಢಪಟ್ಟಿದೆ.




Leave a Reply

Your email address will not be published. Required fields are marked *

error: Content is protected !!