ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಕೋವಿಡ್ 19 ರೂಪಾಂತರಿ ತಳಿಯ ಹಾವಳಿ ಇದೀಗ ಶುರುವಾಗಿದೆ. ಹೀಗಾಗಿ ಸರ್ಕಾರ ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳಲು ಮುಂದಾಗಿದೆ. ಈ ಸಂಬಂಧ ಮುಖ್ಯಮಂತ್ರಿ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಪ್ರಮುಖ ವಿಚಾರಗಳು ಚರ್ಚಗೆ ಬಂದಿವೆ.
ಲಸಿಕೆ ವಿತರಣೆ ವೇಗವಾಗಬೇಕು. ನೆರೆ ರಾಜ್ಯಗಳಿಂದ ಬರುವವರ ಆರ್ ಟಿಪಿಸಿ ಕಡ್ಡಾಯ. ಗಡಿ ಜಿಲ್ಲೆಗಳಲ್ಲಿ ಬಿಗಿ ಭದ್ರತೆ ಸೇರಿದಂತೆ ಹಲವು ಮಾರ್ಗಸೂಚಿಗಳನ್ನು ಸರ್ಕಾರ ಹೊರಡಿಸಿದೆ. ಸರ್ಕಾರಿ ಕಚೇರಿಗಳು, ಮಾಲ್, ಸಿನಿಮಾ ಹಾಲ್, ರೆಸ್ಟೋರೆಂಟ್, ಹೋಟೆಲ್ ಗಳಲ್ಲಿ ಕೆಲಸ ಮಾಡುವವರು ಕಡ್ಡಾಯವಾಗಿ 2 ಡೋಸ್ ಲಸಿಕೆ ಪಡೆದಿರಬೇಕು.
ಶಾಲಾ, ಕಾಲೇಜುಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ, ಸಂವಾದ, ವಿಚಾರ ಸಂಕಿರಣವನ್ನು ತಾತ್ಕಾಲಿಕವಾಗಿ ಮುಂದೂಡಬೇಕು. ಇನ್ನು ಹೊಸ ವರ್ಷ ಹಾಗೂ ಕ್ರಿಸ್ಮಸ್ ಆಚರಣೆ ಸಂಬಂಧ ಇನ್ನೊಮ್ಮೆ ಸಭೆ ಕರೆದು ನಿರ್ಧರಿಸಲಾಗುವುದು ಎಂದು ತಿಳಿಸಲಾಗಿದೆ.