ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕರೋನಾ ಸೋಂಕು ಪ್ರಮಾಣ ಏರಿಕೆಯಾಗ್ತಿದೆ. ಇದರ ಜೊತೆಗೆ ಸಾವಿನ ಸಂಖ್ಯೆ ಏರುತ್ತಲೇ ಇದೆ. ಹೀಗಾಗಿ ನಗರದ ಕೆಲ ಬಡವಾಣೆ, ವಾರ್ಡ್ ಗಳನ್ನ ಸೀಲ್ ಡೌನ್ ಮಾಡಲಾಗಿದೆ. ಇದಕ್ಕೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಟ್ವೀಟ್ ಮೂಲಕ ಆಕ್ರೋಶ ಹೊರಹಾಕಿದ್ದಾರೆ.
ಜನರ ಪ್ರಾಣದ ಜೊತೆ ಚೆಲ್ಲಾಟವಾಡಬೇಡಿ ಎಂದಿರುವ ಹೆಚ್ಡಿಕೆ, ಕೆಲವೇ ಪ್ರದೇಶಗಳಲ್ಲಿ ಸೀಲ್ ಡೌನ್, ಲಾಕ್ ಡೌನ್ ಮಾಡಿದ್ರೆ ಸಾಲದು. ಇಡೀ ಬೆಂಗಳೂರನ್ನ 20 ದಿನಗಳ ಕಾಲ ಸಂಪೂರ್ಣವಾಗಿ ಲಾಕ್ ಡೌನ್ ಮಾಡಿ. ಇಲ್ಲದೆ ಹೋದರೆ ಮತ್ತೊಂದು ಬ್ರೆಜಿಲ್ ಆಗಲಿದೆ ಎಂದು ರಾಜ್ಯ ಸರ್ಕಾರಕ್ಕೆ ಎಚ್ಚರಿಕೆ ರೂಪದ ಸಲಹೆ ನೀಡಿದ್ದಾರೆ.