ನವದೆಹಲಿ: ಬಿಜೆಪಿ ಮಾಜಿ ಕಂದ್ರ ಸಚಿವ, ಸಂಸದ ಸುರೇಶ ಪ್ರಭು ಅವರಿಗೂ ಕರೋನಾ ಸೋಂಕಿನ ಶಂಕೆ ವ್ಯಕ್ತವಾಗಿದೆ. ಹೀಗಾಗಿ 14 ದಿನಗಳ ಕಾಲ ಮನೆಯಲ್ಲಿ ಸ್ವತಃ ಅವರೆ ನಿರ್ಬಂಧನಕ್ಕೆ ಒಳಗಾಗಿದ್ದಾರೆ.
ಸೌದಿ ಅರೇಬಿಯಾದಲ್ಲಿ ನಡೆದ ಕಾರ್ಯಕರ್ಮದಲ್ಲಿ ಅವರು ಭಾಗವಹಿಸಿದ್ರು. ಹೀಗಾಗಿ ಸೋಂಕು ತಗುಲಿರುವ ಶಂಕೆ ವ್ಯಕ್ತವಾಗಿದೆ. ಕರೋನಾಗೆ ಸಂಬಂಧಿಸಿದ ವೈದ್ಯಕೀಯ ಪರೀಕ್ಷೆಯಲ್ಲಿ ನೆಗಿಟಿವ್ ಬಂದಿದೆ. ಆದ್ರೂ, ಮುನ್ನೆಚ್ಚರಿಕೆ ಕ್ರಮವಾಗಿ 14 ದಿನಗಳ ಕಾಲ ಮನೆಯಲ್ಲಿಯೇ ಪ್ರತ್ಯೇಕವಾಗಿ ಉಳಿಯಲಿದ್ದಾರೆ.