ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಇದೀಗ ಮತ್ತೆ ಕೋವಿಡ್ ಶುರುವಾಗಿದೆ ಎಂದು ಹೇಳಲಾಗುತ್ತಿದ್ದು, ಈ ಕುರಿತು ಪ್ರಧಾನಿ ಮೋದಿ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಇಂದು ಸಭೆ ನಡೆಸಿದರು. ಸಭೆ ಬಳಿಕ ಮಾತನಾಡಿದ ಸಿಎಂ ಬೊಮ್ಮಾಯಿ, ರಾಜ್ಯದಲ್ಲಿ ಸಧ್ಯಕ್ಕೆ ಟಫ್ ರೂಲ್ಸ್ ಇಲ್ಲ. 3 ಟಿ ಸೂತ್ರ ಅನುಸರಿಸಲಾಗುತ್ತೆ ಎಂದಿದ್ದಾರೆ.
ಟ್ರ್ಯಾಕ್, ಟ್ರೇಸ್, ಟ್ರೀಟ್ಮೆಂಟ್ ಮೂಲಕ ರಾಜ್ಯದಲ್ಲಿ ಕೋವಿಡ್ ಕಂಟ್ರೋಲ್ ಮಾಡಲಾಗುತ್ತೆ. 6-12 ವರ್ಷದ ಮಕ್ಕಳಿಗೆ ಲಸಿಕೆ ಅಭಿಯಾನ ನಡೆಸಲಾಗುತ್ತೆ. ಮಾಸ್ಕ್ ಕಡ್ಡಾಯ. ಆರ್ಥಿಕ ಸ್ಥಿತಿಗೆ ಕ್ರಮಗಳನ್ನು ತೆಗೆದುಕೊಳ್ಳಬೇಕು. ಅನಗತ್ಯ ನಿಯಗಳು ಬೇಡ ಎಂದಿದ್ದಾರೆ. ಜೊತೆಗೆ ಆಕ್ಸಿಜನ್ ಕೊರತೆಯಾಗದಂತೆ ನೋಡಿಕೊಳ್ಳಿ ಎಂದು ಸಹ ತಿಳಿಸಿದ್ದಾರೆ ಎಂದರು.