ಕರೋನಾ ವಾರಿಯರ್ಸ್ ಮೇಲೆ ಹಲ್ಲೆ: ಸುಗ್ರೀವಾಜ್ಞೆ ಕಳುಹಿಸಿದ ಸರ್ಕಾರ

498

ಬೆಂಗಳೂರು: ಕರೋನಾ ವಾರಿಯರ್ಸ್ ಮೇಲೆ ಒಂದಲ್ಲ ಒಂದು ಕಡೆ ಹಲ್ಲೆ ಮಾಡ್ತಿರುವ ಘಟನೆಗಳು ನಡೆಯುತ್ತಿವೆ. ಹೀಗಾಗಿ ರಾಜ್ಯ ಸರ್ಕಾರ ಕಠಿಣ ನಿರ್ಧಾರಕ್ಕೆ ಬಂದಿದ್ದು, ಸುಗ್ರೀವಾಜ್ಞೆಯನ್ನ ರಾಜ್ಯಪಾಲರಿಗೆ ರವಾನಿಸಲಾಗಿದೆ. ಇಂದು ಸಂಜೆ ಇದಕ್ಕೆ ಅಂಕಿತ ಬೀಳಲಿದೆಯಂತೆ.

ಇನ್ಮುಂದೆ ಕರೋನಾ ವಾರಿಯರ್ಸ್ ಮೇಲೆ ಹಲ್ಲೆ ಮಾಡಿದ್ರೆ, ಅವರ ಕೆಲಸಕ್ಕೆ ಅಡ್ಡಿ ಪಡಿಸಿದ್ರೆ ಅಂತವರಿಗೆ 3 ವರ್ಷ ಜೈಲು ಶಿಕ್ಷೆ ಹಾಗೂ ಆಸ್ತಿ ಮುಟ್ಟುಗೋಲು ಹಾಕಲು ಸರ್ಕಾರ ನಿರ್ಧರಿಸಲಾಗಿದೆ. ಕಳೆದ ಭಾನುವಾರ ಪಾದರಾಯನಪುರದಲ್ಲಿ ಗಲಾಟೆ ನಡೆದಿತ್ತು. ಅದಕ್ಕೂ ಒಂದು ವಾರ ಮೊದಲು ಸಾದಿಕ್ ನಗರದಲ್ಲಿಯೂ ಆಶಾ ಕಾರ್ಯಕರ್ತೆಯರ ಮೇಲೆ ಹಲ್ಲೆ ನಡೆಸಲಾಗಿತ್ತು.

ಈ ಎಲ್ಲ ಕಾರಣಗಳಿಂದ ಇನ್ಮುಂದೆ ಇಂಥಾ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಲು ರಾಜ್ಯ ಸರ್ಕಾರ ಮುಂದಾಗಿದೆ. ಇಂದು ಸಂಜೆ ಸುಗ್ರೀವಾಜ್ಞೆಗೆ ರಾಜ್ಯಪಾಲರು ಅಂಕಿತ ಹಾಕಿದ್ರೆ ಅಲ್ಲಿಗೆ ಮುಗಿತು.




Leave a Reply

Your email address will not be published. Required fields are marked *

error: Content is protected !!