ಸಿಂದಗಿ: ಅಕ್ರಮವಾಗಿ ಕಂಟ್ರಿ ಪಿಸ್ತೂಲ್ ಸಾಗಿಸ್ತಿದ್ದ ವ್ಯಕ್ತಿಯನ್ನ ಬಂಧಿಸಲಾಗಿದೆ. ವಿಜಯಪುರ ಜಿಲ್ಲೆ ಸಿಂದಗಿ ಪಟ್ಟಣದಲ್ಲಿ ರಮೇಶ ಮೇತ್ರಿ ಎಂಬಾತನನ್ನ ಬಂಧಿಸಲಾಗಿದೆ.
ಆಲಮೇಲದಿಂದ ಸಿಂದಗಿ ಮಾರ್ಗವಾಗಿ ಸಾಗಿಸ್ತಿದ್ದಾಗಿ ಸಿಂದಗಿಯಲ್ಲಿ ಸೆರೆ ಹಿಡಿಯಲಾಗಿದೆ. ಚಾಂದಕೋಟೆ ಗ್ರಾಮದ ನಿವಾಸಿ ರಮೇಶ ಮೇತ್ರಿ ಬಳಿಯಿದ್ದ ಒಂದು ಕಂಟ್ರಿ ಪಿಸ್ತೂಲ್ ಹಾಗೂ ಎರಡು ಜೀವಂತ ಗುಂಡುಗಳನ್ನ ವಶಪಡಿಸಿಕೊಳ್ಳಲಾಗಿದೆ. ಈ ಬಗ್ಗೆ ಸಿಂದಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.