ಪ್ರಜಾಸ್ತ್ರ ಅಪರಾಧ ಸುದ್ದಿ
ಬೆಂಗಳೂರು: ಒಂಟಿ ಮನೆಗಳನ್ನು ಗುರಿಯಾಗಿಸಿಕೊಂಡು ದರೋಡೆ ಮಾಡುತ್ತಿದ್ದ ಕಿಲಾಡಿ ದಂಪತಿಯನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರು ಉತ್ತರಹಳ್ಳಿ ಮೂಲದ ನಾಗರಾಜ್ ಹಾಗೂ ರಮ್ಯಾ ಬಂಧಿತ ಆರೋಪಿಗಳು.
ಪ್ರಮುಖ ವಸತಿ ಬಡಾವಣೆಗಳಲ್ಲಿ ಸುತ್ತಿ ಒಂಟಿ ಮನೆಗಳನ್ನು ಗುರುತಿಸುತ್ತಿದ್ದರು. ಬೀಗ ಹಾಕಿದ ಮನೆಗಳನ್ನು ಟಾರ್ಗೆಟ್ ಮಾಡುತ್ತಿದ್ದರು. ನಾಗರಾಜ್ ಮನೆಯೊಳಗೆ ಹೋಗಿ ಕಳ್ಳತನ ಮಾಡುತ್ತಿದ್ದರೆ, ರಮ್ಯಾ ಹೊರಗೆ ನಿಂತುಕೊಂಡು ಸುತ್ತ ಗಮನಿಸುತ್ತಿದ್ದಳು. ಕದ್ದ ಚಿನ್ನವನ್ನು ಅಡವಿಟ್ಟು ಜೀವನ ನಡೆಸುತ್ತಿದ್ದರು.
ಈ ದಂಪತಿ ಮೇಲೆ ಜ್ಞಾನಭಾರತಿ ಪೊಲೀಸ್ ಠಾಣೆಯಲ್ಲಿ ಹಲವು ಪ್ರಕರಣಗಳಿವೆ. ಇದೀಗ ಪೊಲೀಸರ ಅತಿಥಿಯಾಗಿದ್ದಾರೆ. ಸೋಷಿಯಲ್ ಮೀಡಿಯಾ ಮೂಲಕ ಪರಿಚಯವಾದ ಇವರು ಸ್ನೇಹ ಬೆಳೆಸಿದ್ದರು. ನಂತರ ಮದುವೆ ಮಾಡಿಕೊಂಡಿದ್ದಾರೆ. ದುಡಿದು ಜೀವನ ಮಾಡುವುದು ಬಿಟ್ಟು ಕಳ್ಳತನಕ್ಕೆ ಇಳಿದಿದ್ದಾರೆ.