ಕೇಜ್ರಿವಾಲ್ ಗೆ 15 ದಿನ ನ್ಯಾಯಾಂಗ ಬಂಧನ

96

ಪ್ರಜಾಸ್ತ್ರ ಸುದ್ದಿ

ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದಂತೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಗೆ 15 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.

ಇಡಿ ಕಸ್ಟಡಿ ಅವಧಿ ಮುಗಿದಿದ್ದರಿಂದ ಸೋಮವಾರ ರೂಸ್ ಅವೆನ್ಯೂ  ಕೋರ್ಟ್ ಗೆ ಹಾಜರು ಪಡಿಸಲಾಯಿತು. ಈ ವೇಳೆ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಧೀಶರು 15 ದಿನಗಳ ನ್ಯಾಯಾಂಗ ಬಂಧನಕ್ಕೆ ಆದೇಶಿಸಿದರು.

ವಿಚಾರಣೆ ವೇಳೆ ಸಚಿವರಾದ ಅತಿಶಿ, ಸೌರಭ್ ಭಾರದ್ವಾಜ್ ಹಾಗೂ ಕೇಜ್ರಿವಾಲ್ ಪತ್ನಿ ಸುನೀತಾ ಹಾಜರಿದ್ದರು.




Leave a Reply

Your email address will not be published. Required fields are marked *

error: Content is protected !!