ಸಿಎಂ ಕೋವಿಡ್ ಪರಿಹಾರ ನಿಧಿಗೆ 1 ಲಕ್ಷ ದೇಣಿಗೆ

312

ಕೆ.ಆರ್ ಪೇಟೆ: ಕರೋನಾ ಸಂಕಷ್ಟದ ಹಿನ್ನೆಲೆಯಲ್ಲಿ ಮಂಡ್ಯ ಜಿಲ್ಲೆ ಕೃಷ್ಣರಾಜಪೇಟೆ ಪಟ್ಟಣದ ಖ್ಯಾತ ಉದ್ಯಮಿಗಳಾದ ಲಕ್ಷ್ಮಣ ಸೋಲಂಕಿ ಅವರು, ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 1 ಲಕ್ಷ ರೂಪಾಯಿಗಳ ಡಿಡಿಯನ್ನ ನೀಡಿದ್ದಾರೆ.

ತಹಶೀಲ್ದಾರ್ ಎಂ.ಶಿವಮೂರ್ತಿ ಅವರ ಮೂಲಕ 1 ಲಕ್ಷ ರೂಪಾಯಿ ಡಿಡಿ ಹಸ್ತಾಂತರಿಸಿದ್ದಾರೆ. ಈ ವೇಳೆ ಮಾತ್ನಾಡಿದ ಲಕ್ಷ್ಮಣ ಸೋಲಂಕಿ, ಕರೋನಾ ಮಹಾಮಾರಿಯ ಅಟ್ಟಹಾಸಕ್ಕೆ ಇಡೀ ವಿಶ್ವವೇ ಸಂಕಷ್ಟದಲ್ಲಿದೆ. ಉಳ್ಳವರು ಕೈಲಾದ ಸಹಾಯ ಮಾಡಬೇಕು. ಕರೋನಾ ಸಂದಿಗ್ಧ ಪರಿಸ್ಥಿತಿಯನ್ನ ಧೈರ್ಯದಿಂದ ಎದುರಿಸಬೇಕು. ಆರೋಗ್ಯವಂತ ಸಮಾಜದ ನಿರ್ಮಾಣಕ್ಕೆ ಎಲ್ಲರೂ ಕೈಜೋಡಿಸಬೇಕು ಎಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ರಾಜಾಸ್ಥಾನ್ ಸೇವಾಸಮಿತಿಯ ಸಂಚಾಲಕರಾದ ಧರ್ಮೇಂದ್ರ ಸಿರ್ವಿ, ತಾಲೂಕು ಸಮಾಜ ಕಲ್ಯಾಣಾಧಿಕಾರಿ ಡಾ.ಮನುಕುಮಾರ ಉಪಸ್ಥಿತರಿದ್ದರು.




Leave a Reply

Your email address will not be published. Required fields are marked *

error: Content is protected !!