ಕರೋನಾದಿಂದ ಮೃತಪಟ್ಟ ಬಿಪಿಎಲ್ ಕಟುಂಬದ ಒಬ್ಬರಿಗೆ 1 ಲಕ್ಷ ರೂಪಾಯಿ ಪರಿಹಾರ

253

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಕರೋನಾ ಸೋಂಕಿನಿಂದ ಮೃತಪಟ್ಟ ಕುಟುಂಬಗಳು ಬೀದಿಪಾಲಾಗಿವೆ. ಹೀಗಾಗಿ ಬಿಪಿಎಲ್ ಕುಟುಂಬಕ್ಕೆ ಒಬ್ಬರಂತೆ 1 ಲಕ್ಷ ಪರಿಹಾರ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.

ಇನ್ನು ಮಂಡ್ಯ ಹಾಲು ಒಕ್ಕೂಟದಲ್ಲಿ ಕಲಬೆರಕೆಗೆ ಸಂಬಂಧಿಸಿದಂತೆ ಪ್ರಾಥಮಿಕ ತನಿಖೆಗೆ ಆದೇಶ ನೀಡಲಾಗಿದೆ. ವ್ಯವಸ್ಥಾಪಕರನ್ನ ಹಿಂದಕ್ಕೆ ಪಡೆದು ಹೊಸದಾಗಿ ನೇಮಕ ಮಾಡಲಾಗಿದೆ. ಐವರು ಅಧಿಕಾರಿಗಳನ್ನ ಅಮಾನತು ಮಾಡಲಾಗಿದೆ. ಹಾಲು ಉತ್ಪಾದಕರ ಸಂಘದ ವಿರುದ್ಧ ವಿಚಾರಣೆ ನಡೆಸಲಾಗುವುದು.

ಇನ್ನು ಅಪಘಾತದಿಂದ ನಿಧನರಾದ ಸಂಚಾರಿ ವಿಜಯಗೆ ಸಂತಾಪ ಸೂಚಿಸುತ್ತೇನೆ. ಅವರ ಅಗಲಿಕೆ ನೋವನ್ನ ಭರಿಸುವಂತಹ ಶಕ್ತಿಯನ್ನ ಕುಟುಂಬಕ್ಕೆ ನೀಡಲಿ ಎಂದು ಕೇಳಿಕೊಳ್ಳುತ್ತೇನೆ ಎಂದು ಸಿಎಂ ಹೇಳಿದ್ರು.




Leave a Reply

Your email address will not be published. Required fields are marked *

error: Content is protected !!