ಬ್ರೇಕಿಂಗ್ ನ್ಯೂಸ್: ಧಾರ್ಮಿಕ ಸಭೆಯಲ್ಲಿ ಭಾಗಿಯಾದ ಬೀದರನ 11 ಮಂದಿಗೆ ಸೋಂಕು

325

ಬೀದರ: ದೆಲಿಯಲ್ಲಿ ಆಯೋಜಿಸಿದ್ದ ಧಾರ್ಮಿಕ ಸಭೆಯಲ್ಲಿ ಬೀದರ ಜಿಲ್ಲೆಯಿಂದ 27 ಮಂದಿ ತೆರಳಿದ್ರು. ಇದರಲ್ಲಿ 11 ಮಂದಿಗೆ ಕರೋನಾ ಸೋಂಕು ತಗುಲುರಿವುದು ದೃಢಪಟ್ಟಿದೆ. ಈ ಮೂಲಕ ಬೀದರ ಜಿಲ್ಲೆ ಜನತೆಯಲ್ಲಿ ಆತಂಕ ಮನೆ ಮಾಡಿದೆ.

ಈ ಬಗ್ಗೆ ಜಿಲ್ಲಾಧಿಕಾರಿ ಮಹಾದೇವ ಅವರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದು, ದೆಹಲಿಯಲ್ಲಿ ಆಯೋಜಿಸಿದ್ದ ಕಾರ್ಯಕ್ರಮಕ್ಕೆ ಜಿಲ್ಲೆಯಿಂದ 27 ಮಂದಿ ತೆರಳಿದ್ರು. ಈ ಪೈಕಿ 11 ಮಂದಿಗೆ ವೈದ್ಯಕೀಯ ತಪಾಸಣೆ ನಡೆಸಿದ್ದು, ಗಂಟಲು ದ್ರವ ಹಾಗೂ ರಕ್ತದ ಮಾದರಿ ಲ್ಯಾಬ್ ಗೆ ಕಳುಹಿಸಲಾಗಿತ್ತು. ಅದರ ವರದಿ ಬಂದಿದ್ದು, ಅದರಲ್ಲಿ 11 ಮಂದಿಗೂ ಕರೋನಾ ಸೋಂಕು ತಗುಲಿರುವುದು ಪಕ್ಕಾ ಆಗಿದೆ ಎಂದಿದ್ದಾರೆ.

ರಾಜ್ಯದಲ್ಲಿ ಏಕಕಾಲದಲ್ಲಿ 11 ಮಂದಿಗೆ ಸೋಂಕು ತಗುಲಿರುವುದು ಆತಂಕಕ್ಕೆ ಕಾರಣವಾಗಿದೆ. ಇದರ ನಡುವೆ ರಾಜ್ಯದ ಬಹುತೇಕ ಜಿಲ್ಲೆಗಳಿಂದ ಮುಸ್ಲಿಂರು ದೆಹಲಿಯ ಧಾರ್ಮಿಕ ಸಭೆಗೆ ಹೋಗಿದ್ದಾರೆ. ಹೀಗಾಗಿ ಇದೀಗ ಪ್ರತಿಯೊಂದು ಜಿಲ್ಲೆಯಲ್ಲಿ ಆತಂಕ ಮನೆ ಮಾಡಿದೆ.




Leave a Reply

Your email address will not be published. Required fields are marked *

error: Content is protected !!