ಮತ್ತೆ ಲಾಕ್ ಡೌನ್ ಬಗ್ಗೆ ಸಿಎಂ ಹೇಳಿದ್ದೇನು?

305

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಕೋವಿಡ್ 2ನೇ ಅಲೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ನೇತೃತ್ವದಲ್ಲಿ ವಿಧಾನಸೌಧದಲ್ಲಿ ಕೋವಿಡ್ ಸಲಹಾ ಸಮಿತಿ ಸಭೆ ನಡೆಸಲಾಗಿದೆ. ರಾಜ್ಯದಲ್ಲಿ ಸೀಲ್ ಡೌನ್ ಹಾಗೂ ನೈಟ್ ಕರ್ಫ್ಯೂ ಮಾಡದಂತೆ ತಜ್ಞರು ಸಲಹೆ ನೀಡಿದ್ದಾರಂತೆ.

ಈ ಬಗ್ಗೆ ಮಾತ್ನಾಡಿರುವ ಸಿಎಂ, ಕೋವಿಡ್ 2ನೇ ಅಲೆ ಹೆಚ್ಚಾಗ್ತಿದೆ. ಕೇರಳ, ಮಹಾರಾಷ್ಟ್ರದಲ್ಲಿ ಇದರ ಪ್ರಮಾಣ ಹೆಚ್ಚಿದ್ದು, ರಾಜ್ಯದಲ್ಲಿ ಬಿಗಿ ಕ್ರಮ ತೆಗೆದುಕೊಳ್ಳಲಾಗುವುದು. ಸಾರ್ವಜನಿಕರು ಮಾಸ್ಕ್ ಧರಿಸಬೇಕು. ಸಾಮಾಜಿಕ ಅಂತರ ಕಾಪಾಡಿಕೊಳ್ಳಬೇಕು. ಮತ್ತೊಮ್ಮೆ ಲಾಕ್ ಡೌನ್ ಮಾಡದಿರುವಂತೆ ಜನರು ಸಹಕರಿಸಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.




Leave a Reply

Your email address will not be published. Required fields are marked *

error: Content is protected !!