ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ಕರೋನಾ ಸೋಂಕಿತರ ಸಂಖ್ಯೆ ಹೆಚ್ಚಾಗ್ತಿದೆ. ಸಾವಿನ ಪ್ರಮಾಣ ಸಹ ಏರಿಕೆ ಕಾಣ್ತಿದೆ. ಹೀಗಾಗಿ ಎಲ್ಲೆಡೆ ಕಟ್ಟುನಿಟ್ಟಿನ ಕ್ರಮಗಳನ್ನ ತೆಗೆದುಕೊಳ್ಳಲಾಗ್ತಿದೆ. 30ಕ್ಕಿಂತ ಹೆಚ್ಚಿನ ಬೆಡ್ ವ್ಯವಸ್ಥೆಯಿರುವ ಆಸ್ಪತ್ರೆಗಳಲ್ಲಿ ಶೇಕಡ 80ರಷ್ಟು ಕೋವಿಡ್ ಸೋಂಕಿತರಿಗೆ ಮೀಸಲಿಡಬೇಕು ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ ಹೇಳಿದ್ದಾರೆ.
ತುರ್ತು, ಗಂಭೀರ ಸ್ವರೂಪದ ಕಾಯಿಲೆಯಿಂದ ಬಳಲುತ್ತಿರುವವ ರೋಗಿಗಳಿಗೆ ಹಾಸಿಗೆ ಹೊರತು ಪಡಿಸಿ ಉಳಿದಂತೆ ಕೋವಿಡ್ ಸೋಂಕಿತರಿಗೆ ಮೀಸಲಿಡಬೇಕು. ಐಸಿಯುನಲ್ಲಿಯೂ ವ್ಯವಸ್ಥೆ ಮಾಡಬೇಕು ಎಂದು ತಿಳಿಸಿದ್ದಾರೆ. ಕಲಬುರಗಿ, ವಿಜಯಪುರ, ಬೀದರ, ತುಮಕೂರು, ಮೈಸೂರು, ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗಳ ಜೊತೆ ವಿಡಿಯೋ ಸಂವಾದ ನಡೆಸಿ, ಸೂಕ್ತ ಕ್ರಮಕ್ಕೆ ಸೂಚನೆ ನೀಡಲಾಗಿದೆ.