ಸಿಂದಗಿಯಲ್ಲಿ ಪೊಲೀಸರಿಂದ ಕರೋನಾ ಜಾಗೃತಿ

562

ಪ್ರಜಾಸ್ತ್ರ ಸುದ್ದಿ

ಸಿಂದಗಿ: ಪಟ್ಟಣದಲ್ಲಿ ಬೆಳ್ಳಂಬೆಳಗ್ಗೆ ಪೊಲೀಸರು ಕರೋನಾ ಜಾಗೃತಿ ಅಭಿಯಾನ ನಡೆಸಿದ್ರು. ಇಂಡಿ ಡಿವೈಎಸ್ಪಿ ಶ್ರೀಧರ ದೊಡ್ಡಿ ಅವರ ನೇತೃತ್ವದಲ್ಲಿ ಪಟ್ಟಣದ ಅಂಬೇಡ್ಕರ್ ಸರ್ಕಲ್ ಮಾರ್ಗದ ಮೂಲಕ ಅಭಿಯಾನ ಪ್ರಾರಂಭಿಸಲಾಯ್ತು.

ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿದ ಪೊಲೀಸರು, ಜನರಲ್ಲಿ ಜಾಗೃತಿ ಮೂಡಿಸಿದ್ರು. ಅನಗತ್ಯವಾಗಿ ಮನೆಯಿಂದ ಯಾರೂ ಹೊರಗೆ ಬರಬೇಡಿ. ಕಡ್ಡಾಯವಾಗಿ ಮಾಸ್ಕ್ ಧರಿಸಿ ಹಾಗೂ ಸಾಮಾಜಿಕ ಅಂತರ ಪಾಲಿಸಿ ಎಂದರು. ಕರೋನಾ ಮಾರ್ಗಸೂಚಿಗಳನ್ನ ಉಲ್ಲಂಘನೆ ಮಾಡುವವರ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು ಎಂದರು.

ಈ ವೇಳೆ ಸಿಪಿಐ ಹೆಚ್.ಎಂ ಪಟೇಲ, ಪಿಎಸ್ಐ ಅವಿನಾಶ ಕೆರಗೊಪ್ಪ ಸೇರಿದಂತೆ ಪೊಲೀಸ್ ಸಿಬ್ಬಂದಿ ಉಪಸ್ಥಿತರಿದ್ದರು.




Leave a Reply

Your email address will not be published. Required fields are marked *

error: Content is protected !!