ಬೆಂಗಳೂರು: ರಾಜ್ಯದಲ್ಲಿ ಕರೋನಾ ಸೋಂಕಿತರಿಗೆ ಆಯುರ್ವೇದ ಚಿಕಿತ್ಸೆ ಶುರು ಮಾಡುವುದಕ್ಕೆ ರಾಜ್ಯ ಸರ್ಕಾರ ಒಪ್ಪಿಗೆ ನೀಡಿದೆ. ಈ ಬಗ್ಗೆ ಸಿಎಂ ಬಿ.ಎಸ್ ಯಡಿಯೂರಪ್ಪ ಹಿರಿಯ ವೈದ್ಯ ಡಾ.ಗಿರಿಧರ ಕಜೆ ಅವರಿಗೆ ವಿಷಯ ತಿಳಿಸಿದ್ದಾರೆ.
ಸಿಎಂ ಭೇಟಿ ಬಳಿಕ ಮಾಧ್ಯಮದವರೊಂದಿಗೆ ಮಾತ್ನಾಡಿದ ಡಾ.ಗಿರಿಧರ, ಶುರುವಿನಲ್ಲಿ 10 ಮಂದಿ ಕರೋನಾ ಸೋಂಕಿತರಿಗೆ ಕೋವಿಡ್ ಆಸ್ಪತ್ರೆಯಲ್ಲಿ ಆಯುರ್ವೇದ ಮಾತ್ರೆ ನೀಡಲಾಗುವುದು. ಇದರ ರಿಸಲ್ಟ್ ನೋಡಿಕೊಂಡು ಮುಂದಿನ ದಿನಗಳಲ್ಲಿ ಮುಂದುವರೆಸುವ ನಿರ್ಧಾರ ಮಾಡಲಾಗುವುದು ಎಂದರು.
ಇನ್ನು ಎರಡ್ಮೂರು ದಿನಗಳಲ್ಲಿ ಈ ಚಿಕಿತ್ಸೆ ಶುರುವಾಗಲಿದೆ. ಸರ್ಕಾರದಿಂದ ಅಧಿಕೃತ ಆದೇಶ ಬಂದ ತಕ್ಷಣ ಆಯುರ್ವೇದ ಔಷಧಿ ಪ್ರಯೋಗ ನಡೆಯಲಿದೆ ಎಂದು ತಿಳಿಸಿದ್ದಾರೆ.