ಕೋವಿಡ್ 19 ಬೂಸ್ಟರ್ ಡೋಸ್ ಲಸಿಕೆ ಅಭಿಯಾನ

272

ಪ್ರಜಾಸ್ತ್ರ ಸುದ್ದಿ

ಸಿಂದಗಿ: ಕೋವಿಡ್ 19 ಸೋಂಕಿನ ಬೂಸ್ಟರ್ ಡೋಸ್ ಲಸಿಕೆ ಅಭಿಯಾನವನ್ನು ತಾಲೂಕು ನ್ಯಾಯಾಲಯದ ಸಭಾಭವನದಲ್ಲಿ ನಡೆಸಲಾಯಿತು. ತಾಲೂಕು ಕಾನೂನು ಸೇವಾ ಸಮಿತಿ, ವಕೀಲರ ಸಂಘ ಹಾಗೂ ಆರೋಗ್ಯ ಇಲಾಖೆ ಸಿಂದಗಿ ಇವರ ಸಂಯುಕ್ತ ಆಶ್ರಯದಲ್ಲಿ ಕೋವಿಡ್ ವಾಕ್ಸಿನ್ ಅಭಿಯಾನ ನಡೆಸಲಾಯಿತು.

ಸಿಂದಗಿ ಜೆಎಂಎಫ್ ಸಿ ಪ್ರಧಾನ ಸಿವಿಲ್ ನ್ಯಾಯಾಧೀಶರಾದ ಮಹಾಂತೇಶ ಭೂಸಗೋಳ ಕಾರ್ಯಕ್ರಮ ಉದ್ಘಾಟಿಸಿದರು. ಹೆಚ್ಚುವರಿ ಸಿವಿಲ್ ನ್ಯಾಯಾಧೀಶರಾದ  ಹರೀಶ ಜಾಧವ, ವಕೀಲರ ಸಂಘದ ಅಧ್ಯಕ್ಷ ಎಸ್.ಬಿ ದೊಡಮನಿ, ಸಹಾಯಕ ಸರ್ಕಾರಿ ವಕೀಲರಾದ ಆನಂದ ರಾಠೋಡ, ಎಫ್.ಜೆಡ್ ಖತೀಬ್, ಅಪರ ಸರಕಾರಿ ವಕೀಲರಾದ ಎಂ.ಎಸ್ ಪಾಟೀಲ, ಆರೋಗ್ಯ ನಿರೀಕ್ಷಣಾಧಿಕಾರಿ ವಿರೇಂದ್ರ ಬವಾಡೆ, ಆರೋಗ್ಯ ಶಿಕ್ಷಣಾಧಿಕಾರಿ ಶ್ರೀಹರಿ ಕುಲಕರ್ಣಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ತಾಲೂಕು ವೈದ್ಯಾಧಿಕಾರಿ ಎಂ.ಆರ್ ಬಡಗೇರ ಅಧ್ಯಕ್ಷತೆ ವಹಿಸಿದ್ದರು.




Leave a Reply

Your email address will not be published. Required fields are marked *

error: Content is protected !!