ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಸಧ್ಯ ಕೋವಿಡ್ ಸೋಂಕಿನ ಪ್ರಮಾಣ ಇಳಿಮುಖವಾಗುತ್ತಿದೆ ಹೀಗಾಗಿ ಶಾಲೆಗಳನ್ನ ಪ್ರಾರಂಭ ಮಾಡಲಾಗಿದೆ. ಒಂದು ವೇಳೆ ಸೋಂಕಿನ ಪ್ರಮಾಣ ಹೆಚ್ಚಾದರೆ ಮತ್ತೆ ಶಾಲೆಗಳನ್ನ ಬಂದ್ ಮಾಡಲಾಗುತ್ತೆ ಎಂದು ಶಿಕ್ಷಣ ಸಚಿವ ಬಿ.ಸಿ ನಾಗೇಶ ಹೇಳಿದ್ದಾರೆ.
ರಾಜ್ಯದಲ್ಲಿ ಕೋವಿಡ್ ಪಾಸಿಟಿವಿಟಿ ದರ ಶೇಕಡ 1ರಷ್ಟಿದೆ. ಆದ್ರೆ, ಮಹಾರಾಷ್ಟ್ರ ಹಾಗೂ ಕೇರಳದಲ್ಲಿ ಇದರ ಪ್ರಮಾಣ ಹೆಚ್ಚಿದೆ. ಒಂದು ವೇಳೆ ರಾಜ್ಯದಲ್ಲಿಯೂ ಸೋಂಕು ಹೆಚ್ಚಾಗುವುದು ಕಂಡು ಬಂದರೆ ಮತ್ತೆ ಶಾಲೆಗಳನ್ನ ಬಂದ್ ಮಾಡಲಾಗುವುದು ಎಂದು ತಿಳಿಸಿದ್ದಾರೆ.