ಸಿಎಂ, ಸಚಿವರಿಗೆ ಕೋವಿಡ್.. ಬಿಜೆಪಿ ರಾಜ್ಯಾಧ್ಯಕ್ಷರಿಗೂ ಸೋಂಕು..

531

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಕೋವಿಡ್ 19 ಸೋಂಕು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರಿಗೆ ತಗುಲಿದೆ. ಇದಕ್ಕೂ ಮೊದಲು ಕಂದಾಯ ಸಚಿವ ಆರ್.ಅಶೋಕ್, ಅದಕ್ಕೂ ಮೊದ್ಲು ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಅವರಿಗೂ ಸೋಂಕು ದೃಢಪಟ್ಟಿದೆ. ಹೀಗಾಗಿ ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಇನ್ನು ಆರೋಗ್ಯ ಸಚಿವ ಡಾ.ಕೆ ಸುಧಾಕರ್, ಸಿಎಂ ಅವರ ಪ್ರಾಥಮಿಕ ಸಂಪರ್ಕದಲ್ಲಿದ್ದ ಕಾರಣಕ್ಕೆ ಈಗ ಅವರು ಹೋಮ್ ಐಸೋಲೇಷನ್ ಆಗಿದ್ದಾರೆ. ಹೀಗಾಗಿ ಎರಡು ದಿನಗಳ ಕಾಲ ನಾನು ಪ್ರತ್ಯೇಕವಾಗಿರುತ್ತೇನೆ. ಆರ್ ಟಿಪಿಸಿ ವರದಿ ಬಂದ ನಂತರ ನೆಗಟಿವ್ ಬಂದಿದ್ದರೆ ಎಂದಿನಂತೆ ಕಾರ್ಯದಲ್ಲಿ ಭಾಗವಹಿಸುತ್ತೇನೆ ಎಂದಿದ್ದಾರೆ.

ಇನ್ನು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರಿಗೆ ಕರೋನಾ ಸೋಂಕು ದೃಢಪಟ್ಟಿದೆ. ಅವರು ಚಿಕಿತ್ಸೆ ಪಡೆಯುತ್ತಿದ್ದಾರೆ. ಹೀಗಾಗಿ ಸರ್ಕಾರದ ಭಾಗವಾಗಿರುವ ಸಚಿವರು, ಶಾಸಕರಲ್ಲಿ ಸೋಂಕು ಕಾಣಿಸಿಕೊಳ್ಳುತ್ತಿದೆ. ಹೀಗಿರುವಾಗ ಕಾಂಗ್ರೆಸ್ ಪಾದಯಾತ್ರೆ ಹೊರಟಿದೆ. ಇದರ ಪರಿಣಾಮ ಏನಾಗುತ್ತೋ ಅನ್ನೋ ಆತಂಕ ಮೂಡಿದೆ.




Leave a Reply

Your email address will not be published. Required fields are marked *

error: Content is protected !!