ಕೋವಿಡ್ ಪರಿಸ್ಥಿತಿ ನಿರ್ವಹಣೆ: ತಜ್ಞರೊಂದಿಗೆ ಸಿಎಂ ಸಭೆ

464

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಕೋವಿಡ್ 19 3ನೇ ಅಲೆ ಹಾಗೂ ಓಮಿಕ್ರಾನ್ ಸೋಂಕು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಇಂದು ಮಧ್ಯಾಹ್ನ ಸಭೆ ನಡೆಸಲಿದ್ದಾರೆ. ಗೃಹ ಕಚೇರಿ ಕೃಷ್ಣಾದಲ್ಲಿ ಸಚಿವರು ಹಾಗೂ ತಜ್ಞರ ಜೊತೆ ಸಭೆ ನಡೆಸಲಿದ್ದಾರೆ.

ಬೆಂಗಳೂರು ಹಾಗೂ ಉಳಿದ ಜಿಲ್ಲೆಗಳಲ್ಲಿನ ಸೋಂಕು ಪ್ರಕರಣ, ಆಸ್ಪತ್ರೆಗೆ ದಾಖಲಾಗುವವರ ಮೇಲೆ ನಿಗಾವಹಿಸಲಾಗುವುದು, ಜನರ ಆರೋಗ್ಯ ರಕ್ಷಣೆಗೆ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುವುದು. ಬೆಂಗಳೂರಿನಲ್ಲಿ ಶಾಲೆಗಳನ್ನು ಪುನಾಃರಂಭಿಸಬೇಕು ಅನ್ನೋ ಬೇಡಿಕೆ ಇದೆ. ನಿರ್ಬಂಧ ಸಡಿಲಿಕೆಯ ಬೇಡಿಕೆ ಇದೆ. ಹೀಗಾಗಿ ಎಲ್ಲರೊಂದಿಗೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!