ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಕೋವಿಡ್ 19 ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ವರ್ಚುವಲ್ ಮೂಲಕ ಸಚಿವರು ಹಾಗೂ ಅಧಿಕಾರಿಗಳೊಂದಿಗೆ ಕೋವಿಡ್ 19 ಸ್ಥಿತಿಗತಿ ಬಗ್ಗೆ ಸಭೆ ನಡೆಸಿದರು.
ಆರೋಗ್ಯ ಸಚಿವ ಡಾ.ಕೆ ಸುಧಾಕರ್, ಗೃಹ ಸಚಿವ ಅರಗ ಜ್ಞಾನೇಂದ್ರ ಸೇರಿದಂತೆ ಇತರೆ ಅಧಿಕಾರಿಗಳು ಭಾಗವಹಿಸಿದ್ದರು. ಸೋಂಕು ಹೆಚ್ಚಳವಾಗುತ್ತಿರುವುದರಿಂದ ಮುಂದಿನ ದಿನಗಳಲ್ಲಿ ಇನ್ನಷ್ಟು ಕಠಿಣ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ತಿಳಿದು ಬಂದಿದೆ.
ಇನ್ನು ಸೋಂಕು ಹೆಚ್ಚು ಕಂಡು ಬರುವ ಜಿಲ್ಲೆಗಳಲ್ಲಿ ಶಾಲೆಗಳನ್ನು ಬಂದ್ ಮಾಡುವ ಅಧಿಕಾರ ಜಿಲ್ಲಾಧಿಕಾರಿಗಳಿಗೆ ನೀಡಲಾಗಿದೆ ಎಂದು ಗೃಹ ಸಚಿವರ ಅರಗ ಜ್ಞಾನೇಂದ್ರ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ದಿನಕ್ಕೆ 1.50 ಲಕ್ಷ ಕೋವಿಡ್ ಟೆಸ್ಟ್ ಮಾಡಬೇಕು ಎಂದು ನಿರ್ಧರಿಸಲಾಗಿದೆ. ಐಸೋಲೇಶನ್ ನಲ್ಲಿದ್ದವರ ಬಗ್ಗೆ ಗಮನ ಹರಿಸಬೇಕು. ಸಂಕ್ರಾಂತಿ, ವೈಕುಂಠ ಏಕಾದಶಿ ಸಂದರ್ಭದಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದ್ದಾರೆ.