ಪ್ರಜಾಸ್ತ್ರ ಸುದ್ದಿ
ಮೈಸೂರು: ಕಣಿಗಲ್ ಶಾಸಕ ಡಾ.ರಂಗನಾಥ ಅವರಿಗೆ ಕರೋನಾ ಸೋಂಕು ದೃಢಪಟ್ಟಿದೆ. ಹೀಗಾಗಿ ಇವರ ಸಂಪರ್ಕದಲ್ಲಿದ್ದ ವಿಪಕ್ಷ ನಾಯಕ ಸಿದ್ದರಾಮಯ್ಯನವರು ಸ್ವತಃ ಹೋಂ ಕ್ವಾರಂಟೈನ್ ಆಗಿದ್ದಾರೆ.
ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ ಶಿವಕುಮಾರ ಪದಗ್ರಹಣ ಸ್ವೀಕರಿಸುವ ಟೈಂನಲ್ಲಿ, ಶಾಸಕ ರಂಗನಾಥ ಇದರ ಉಸ್ತುವಾರಿ ವಹಿಸಿಕೊಂಡಿದ್ರು. ಕಾರ್ಯಕ್ರಮದ ಎಲ್ಲ ಕೆಲಸವನ್ನ ಇವರು ಮಾಡಿದ್ರು. ಇನ್ನು ಕಾರ್ಯಕ್ರಮದಲ್ಲಿ ಸಿದ್ದರಾಮಯ್ಯನವರು ಭಾಗಹಿವಿಸಿದ್ರು. ಹೀಗಾಗಿ ಮೈಸೂರು ಹೊರವಲಯದ ತಮ್ಮ ತೋಟದ ಮನೆಯಲ್ಲಿ ಗೃಹ ಬಂಧಿಯಾಗಿದ್ದಾರೆ.
ಇನ್ನು ಪ್ರತಿಜ್ಞಾ ವಿಧಿ ಕಾರ್ಯಕ್ರಮದಲ್ಲಿ ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ ಹಲವು ಘಟಾನುಘಟಿ ನಾಯಕರು, ಪಕ್ಷದ ಪ್ರಮುಖರು ಭಾಗವಹಿಸಿದ್ರು. ಈಗ ಅವರಲ್ಲಿಯೂ ಆತಂಕ ಶುರುವಾಗಿದೆ.