ತುಮಕೂರು: ರಾಜ್ಯದಲ್ಲಿ ಕರೋನಾ ವೈರಸ್ ನಿಂದ ಮೃತಪಟ್ಟವರ ಸಂಖ್ಯೆ ಮೂರಕ್ಕೆ ಏರಿಕೆಯಾಗಿದೆ. ಕಲ್ಪತರು ನಾಡಿನಲ್ಲಿ ಇಂದು ವ್ಯಕ್ತಿಯೊಬ್ಬ ಸಾವನ್ನಪ್ಪಿದ್ದಾನೆ. ಅದು ಕರೋನಾದಿಂದಾಗಿ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಶಿರಾ ಮೂಲದ 60 ವರ್ಷದ ವೃದ್ಧನೊಬ್ಬ ಕರೋನಾಗೆ ಬಲಿಯಾಗಿದ್ದಾನೆ. ಇಂದು ಬೆಳಗ್ಗೆ 10.45ಕ್ಕೆ ಮೃತಪಟ್ಟಿದ್ದಾನೆ. ಕರೋನಾದಿಂದ ಸಾವನ್ನಪ್ಪಿರುವುದು ಇದೀಗ ದೃಢಪಟ್ಟಿದೆ. ಮೃತ ವ್ಯಕ್ತಿ 13 ಜನರೊಂದಿಗೆ ಪ್ರಯಾಣ ಬೆಳೆಸಿದ್ದು ಹಾಗೂ 33 ಜನರೊಂದಿಗೆ ಸಂಪರ್ಕ ಹೊಂದಿದ್ದ ಎಂದು ಜಿಲ್ಲಾಧಿಕಾರಿ ಡಾ.ರಾಕೇಶಕುಮಾರ ತಿಳಿಸಿದ್ದಾರೆ.