ಕರೋನಾ ಭೀತಿ: ಸಿಂದಗಿಯಲ್ಲಿ ರೈತ ಆತ್ಮಹತ್ಯೆ

599

ಸಿಂದಗಿ: ಕರೋನಾ ಭೀತಿ ಹಿನ್ನೆಲೆಯಲ್ಲಿ ವಿಜಯಪುರ ಜಿಲ್ಲೆ ಸಿಂದಗಿ ತಾಲೂಕಿನ ಕಕ್ಕಳಮೇಲಿ ಗ್ರಾಮದಲ್ಲಿ ರೈತ ಆತ್ಮಹತ್ಯೆ ಮಾಡಿಕೊಂಡಿದ್ದಾಣೆ. ವಿಷ ಸೇವಿಸಿ ರೈತ ಆತ್ಮಹತ್ಯೆಗೆ ಶರಣಾಗಿದ್ದಾನೆ.

45 ವರ್ಷದ ಧರ್ಮಣ್ಣ ಜಾಡರ ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ. ಬೆಳೆದ ಬೆಳೆ ನಾಶವಾಗಿರುವ ಹಿನ್ನಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗ್ತಿದೆ. ಈತ ಮೊರಟಗಿ ಗ್ರಾಮದ ಬ್ಯಾಂಕ್ ಆಫ್ ಮಹಾರಾಷ್ಟ್ರದಲ್ಲಿ 2 ಲಕ್ಷ,  ಪಿಕೆಪಿಎಸ್ ದಲ್ಲಿ 45 ಸಾವಿರ ಹಾಗೂ ಖಾಸಗಿಯಾಗಿ 3 ಲಕ್ಷ ಸಾಲ‌ ಮಾಡಿದ್ದನಂತೆ. ಸಿಂದಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




Leave a Reply

Your email address will not be published. Required fields are marked *

error: Content is protected !!