ರಾಜ್ಯದಲ್ಲಿ ಚೇತರಿಕೆ ಪ್ರಮಾಣ ಶೇ.5ರಷ್ಟು ಏರಿಕೆ

272

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ಕರುನಾಡಿನಲ್ಲಿ ಕರೋನಾ ಆರ್ಭಟ ಜೋರಾಗಿಯೇ ಇದೆ. ಹೀಗಾಗಿ ಕಳೆದ ಹಲವು ದಿನಗಳಿಂದ 5ಸಾವಿರಕ್ಕೂ ಅಧಿಕ ಸೋಂಕು ಕಾಣಿಸಿಕೊಳ್ತಿದೆ. ಇದರ ನಡುವೆ ಸಣ್ಣದೊಂದು ಆಶಾದಾಯ ಸಂಗತಿ ಅಂದ್ರೆ, ಗುಣಮುಖರಾಗ್ತಿರುವವರ ಸಂಖ್ಯೆಯಲ್ಲಿ ಏರಿಕೆ ಕಾಣಿಸಿಕೊಳ್ತಿರುವುದು.

ರಾಜ್ಯದಲ್ಲಿ ಕೋವಿಡ್ 19 ಸೋಂಕಿತರ ಚೇತರಿಕೆಯಲ್ಲಿ ಶೇಕಡ 5.67ರಷ್ಟು ಏರಿಕೆಯಾಗಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ ಹೇಳಿದ್ದಾರೆ. ಇನ್ನು ಬೆಂಗಳೂರಿನಲ್ಲಿ ಶೇಕಡ 9.17ರಷ್ಟು ಏರಿಕೆ ಕಂಡಿದೆ ಎಂದು ತಿಳಿಸಿದ್ದಾರೆ.

ಇನ್ನು ಮಡಿವಾಳದ ಸೇಂಟ್ ಜಾನ್ಸ್ ಖಾಸಗಿ ಆಸ್ಪತ್ರೆಯಲ್ಲಿ ನಡೆದ ಘಟನೆ ಮಾತ್ನಾಡಿದ ಅವರು, ಹಣಕ್ಕಿಂತ ಮಾನವೀಯತೆ ದೊಡ್ಡದು. ತಂದೆಯ ಮೃತದೇಹಕ್ಕಾಗಿ ಮಗಳು ಅಳುತ್ತಿರುವುದು ಮಾಧ್ಯಮಗಳಲ್ಲಿ ನೋಡಿದ್ದು, ಮಹಿಳೆಯ ಸಮಸ್ಯೆ ಬಗೆಹರಿಸುವಂತೆ ಅಧಿಕಾರಿಗಳಿಗೆ ಸೂಚಿಸಿದ್ದೇನೆ ಎಂದು ಹೇಳಿದ್ರು.




Leave a Reply

Your email address will not be published. Required fields are marked *

error: Content is protected !!