ಬಾಗಲಕೋಟೆ: ಜಿಲ್ಲೆಯಲ್ಲಿ ಪತ್ತೆಯಾದ ಮೊದಲ ಕರೋನಾ ಸೋಂಕಿತ ವ್ಯಕ್ತಿ ಸಾವನ್ನಪ್ಪಿದ್ದಾನೆ. ಜಿಲ್ಲೆಯ ನವನಗರದ ನಿವಾಸಿಯಾದ 75 ವರ್ಷದ ವೃದ್ಧ ಶುಕ್ರವಾರ ರಾತ್ರಿ ನಿಧನ ಹೊಂದಿದ್ದಾನೆ. ಈತನಿಗೆ ಕರೋನಾ ಸೋಂಕು ಕಾಣಿಸಿಕೊಂಡಿರುವುದು ದೃಢವಾಗಿತ್ತು. ವೃದ್ಧನ ಸಾವಿನ ಬಗ್ಗೆ ಜಿಲ್ಲಾಧಿಕಾರಿ ಡಾ.ಕೆ ರಾಜೇಂದ್ರ ಖಚಿತ ಪಡಿಸಿದ್ದಾರೆ.
ಕಿರಾಣಿ ವ್ಯಾಪಾರ ಮಾಡ್ತಿದ್ದ ಈತ ಎಲ್ಲಿಯೂ ವಿದೇಶ ಪ್ರವಾಸ ಮಾಡಿಲ್ಲ. ಹೊರ ರಾಜ್ಯಕ್ಕೂ ಹೋಗಿಲ್ಲ. ಆದ್ರೂ ಈತನಲ್ಲಿ ಕರೋನಾ ಸೋಂಕು ಕಾಣಿಸಿಕೊಂಡಿತ್ತು. ಕರೋನಾದಿಂದ ಮೃತಪಟ್ಟವರ ಅಂತ್ಯ ಸಂಸ್ಕಾರದ ಮಾರ್ಗಸೂಚಿ ಅನ್ವಯ 5ಕ್ಕಿಂತ ಹೆಚ್ಚು ಜನ ಸೇರದಂತೆ ನೋಡಿಕೊಳ್ಳಲಾಗ್ತಿದೆ.
ಇನ್ನು ಹುಬ್ಬಳ್ಳಿಯಲ್ಲಿ ಕರೋನಾ ಶಂಕಿತ ವ್ಯಕ್ತಿ ಇಂದು ಮೃತಪಟ್ಟಿದ್ದಾನೆ. ಪುಣೆಯಿಂದ ಸ್ವಗ್ರಾಮಕ್ಕೆ ಆಗಮಿಸಿದ್ದ ಟೆಕ್ಕಿ ಅನುಮಾನಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದಾನೆ. ಜ್ವರ, ನೆಗಡಿ, ಕೆಮ್ಮು, ನ್ಯೂಮೋನಿಯಾದಿಂದ ಬಳಲುತ್ತಿದ್ದ ಕಾರಣ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಕರೋನಾ ಶಂಕೆಯ ಹಿನ್ನೆಲೆಯಲ್ಲಿ ರಕ್ತ ಹಾಗೂ ಗಂಟಲು ದ್ರವನ್ನ ಶಿವಮೊಗ್ಗದ ಲ್ಯಾಬ್ ಗೆ ಕಳುಹಿಸಲಾಗಿತ್ತು. ಅದರ ವರದಿ ಬರುವ ಮೊದಲೇ ಸಾವನ್ನಪ್ಪಿದ್ದಾನೆ. ಕಿಮ್ಸ್ ವೈದ್ಯರು ನಡೆಸಿದ ಪರೀಕ್ಷೆಯಲ್ಲಿ ಕಾಮಣಿ ರೋಗ ಪತ್ತೆಯಾಗಿತ್ತು. ಇದೀಗ ಶಿವಮೊಗ್ಗದಿಂದ ಬರುವ ವರದಿಗಾಗಿ ಕಾಯುತ್ತಿದ್ದಾರೆ. ಇದ್ರಿಂದಾಗಿ ಹುಬ್ಬಳ್ಳಿ-ಧಾರವಾಡ ಜನರಲ್ಲಿ ಆತಂಕ ಮೂಡಿದೆ.