ಓಮಿಕ್ರಾನ್ ಆತಂಕ ಬೇಡ: ಸಿಎಂ‌ ಬೊಮ್ಮಾಯಿ

540

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ರಾಜ್ಯದಲ್ಲಿ ಇದೀಗ ಕೋವಿಡ್ 3ನೇ ಅಲೆ ಅಬ್ಬರ ಜೋರಾಗಿದೆ. ರೂಪಾಂತರ ಓಮಿಕ್ರಾನ್ ಆತಂಕ ಮನೆ ಮಾಡಿದೆ. ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಮಾತನಾಡಿದ್ದಾರೆ.

3ನೇ ಅಲೆ ದೊಡ್ಡ ಪರಿಣಾಮ ಬೀರಲ್ಲ. ಈ ಬಗ್ಗೆ ಜನರಿಗೆ ಆತಂಕ ಬೇಡ. ಕ್ರಮಗಳ ಕುರಿತು ನಾಳೆ ಸಚಿವ ಸಂಪುಟ ಸಭೆ ನಡೆಸಲಾಗುವುದು. ತಾಂತ್ರಿಕ ಸಲಹಾ ಸಮಿತಿ, ಸಚಿವರು, ಅಧಿಕಾರಿಗಳ ಜೊತೆಗೆ ಸಭೆ ನಡೆಸಿ ಮಾರ್ಗಸೂಚಿ ಬಗ್ಗೆ ತಿಳಿಸಲಾಗುವುದು ಎಂದಿದ್ದಾರೆ.

ಮೂರನೇ ಅಲೆ ಅಷ್ಟೊಂದು ಪರಿಣಾಮ ಬೀರಲ್ಲವೆಂದು ಹೇಳಿದರೂ ಜನರು ಅದರ ಬಗ್ಗೆ ನಿರ್ಲಕ್ಷ್ಯ ವಹಿಸಬಾರದು. ಮಾಸ್ಕ್, ಸಾಮಾಜಿಕ ಅಂತರ ಸೇರಿದಂತೆ ಎಲ್ಲ ರೀತಿಯ ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಬೇಕಿದೆ.




Leave a Reply

Your email address will not be published. Required fields are marked *

error: Content is protected !!