‘ಮಹಾ’ದಲ್ಲಿ ಪತ್ರಕರ್ತರಿಗೆ ಕರೋನಾ: ರಾಜ್ಯದ ಪತ್ರಕರ್ತರಿಗೆ ಟೆಸ್ಟಿಂಗ್ ಚಿಂತನೆ

344

ಬೆಂಗಳೂರು: ಕರೋನಾ ವೈರಸ್ ಹುಟ್ಟಿಸಿರುವ ಭಯ ಎಷ್ಟೊಂದು ಇದೆ ಅನ್ನೋದು ಪ್ರತಿಯೊಬ್ಬರಿಗೂ ಗೊತ್ತಿದೆ. ಇದೀಗ ಪತ್ರಕರ್ತರಲ್ಲಿ ಕರೋನಾ ಸೋಂಕು ಕಾಣಿಸಿಕೊಳ್ತಿದ್ದು ಸಾಕಷ್ಟು ಆತಂಕ ಮೂಡಿಸಿದೆ. ಸಾರ್ವಜನಿಕರೊಂದಿಗೆ, ರಾಜಕಾರಣಿಗಳೊಂದಿಗೆ, ಅಧಿಕಾರಿಗಳೊಂದಿಗೆ ಹೆಚ್ಚು ಒಡನಾಟ ಇಟ್ಟುಕೊಳ್ಳುವವರು ಪತ್ರಕರ್ತರು. ಹೀಗಾಗಿ ಅವರಲ್ಲಿ ಸೋಂಕು ಕಾಣಿಸಿಕೊಂಡಿರುವುದು ಆತಂಕ ಮೂಡಿಸಿದೆ.

ನೆರೆಯ ಮಹಾರಾಷ್ಟ್ರದಲ್ಲಿ 53 ಪತ್ರಕರ್ತರಿಗೆ ಸೋಂಕು ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ, ರಾಜ್ಯದಲ್ಲಿರುವ ಪತ್ರಕರ್ತರಿಗೆ ಟೆಸ್ಟಿಂಗ್ ಗೆ ಚಿಂತನೆ ನಡೆಸಲಾಗ್ತಿದೆ. ಈ ಬಗ್ಗೆ ಶಿಕ್ಷಣ ಸಚಿವ ಸುರೇಶಕುಮಾರ ಸಿಎಂಗೆ ಪತ್ರ ಬರೆದಿದ್ದಾರೆ ಎಂದು ಹೇಳಲಾಗ್ತಿದೆ. ಕರೋನಾ ವಿರುದ್ಧ ಹಗಲಿರುಳು ದುಡಿಯುತ್ತಿರುವ ಪತ್ರಕರ್ತರಿಗೆ ಕರೋನಾ ಟೆಸ್ಟ್ ಮಾಡಿಸುವ ಚಿಂತನೆ ನಡೆದಿದೆ ಅನ್ನೋ ಮಾತುಗಳು ಕೇಳಿ ಬಂದಿವೆ.

ಮಹಾರಾಷ್ಟ್ರದಲ್ಲಿ 176ಕ್ಕೂ ಹೆಚ್ಚು ಪತ್ರಕರ್ತ ರಕ್ತ ಹಾಗೂ ಗಂಟಲು ದ್ರವ ಮಾದರಿ ಕಳುಹಿಸಲಾಗಿತ್ತು. ಇದರಲ್ಲಿ 53 ಜನರಿಗೆ ಸೋಂಕು ಕಾಣಿಸಿಕೊಂಡಿರುವುದು ಆತಂಕ ಮೂಡಿಸಿದೆ.




Leave a Reply

Your email address will not be published. Required fields are marked *

error: Content is protected !!