ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಎಲ್ಲೆಡೆ ಸೋಂಕು ಹೆಚ್ಚಾಗ್ತಿರುವ ಹಿನ್ನೆಲೆಯಲ್ಲಿ ಸಂಪೂರ್ಣ ಲಾಕ್ ಡೌನ್ ಗೆ ಸಿದ್ಧತೆ ನಡೆದಿದೆ ಅನ್ನೋ ಮಾತುಗಳು ಕೇಳಿ ಬಂದಿವೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿ ಯಡಿಯೂರಪ್ಪ, ಪ್ರಧಾನಿ ಸೂಚನೆಗಾಗಿ ಕಾಯುತ್ತಿದ್ದೇವೆ ಎಂದು ಹೇಳಿದ್ದಾರೆ.
ಸುಪ್ರೀಂ ಕೋರ್ಟ್ ಸಲಹೆ ಸೇರಿದಂತೆ ಎಲ್ಲರ ಸೂಚನೆ ಕುರಿತಂತೆ ಸಂಜೆ ಪ್ರಧಾನಿ ಸಚಿವ ಸಂಪುಟ ಸಭೆ ನಡೆಸಲಿದ್ದಾರೆ. ಬಳಿಕ ಲಾಕ್ ಡೌನ್ ಕುರಿತು ಪ್ರಧಾನಿ ನಿರ್ಧಾರ ತಿಳಿಯಲಿದೆ. ಅವರು ಲಾಕ್ ಡೌನ್ ಮಾಡಲು ಸಲಹೆ ನೀಡಿದ್ರೆ, ಲಾಕ್ ಡೌನ್ ಜಾರಿಗೆ ಬರುತ್ತೆ ಎಂದಿದ್ದಾರೆ.