ಕೋವಿಡ್ ನಿರ್ವಹಣೆ: ಸಿದ್ದು ಹೇಳಿದ ಇಲಾಖಾವಾರು ಲೆಕ್ಕವೆಷ್ಟು?

319

ಪ್ರಜಾಸ್ತ್ರ ಸುದ್ದಿ

ಬೆಂಗಳೂರು: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ ಅವರು ನಡೆಸಿದ ಸುದ್ದಿಗೋಷ್ಠಿಯಲ್ಲಿ, ರಾಜ್ಯ ಸರ್ಕಾರದ ವಿರುದ್ಧ 2 ಸಾವಿರ ಕೋಟಿ ರೂಪಾಯಿ ಅವ್ಯವಹಾರದ ಆರೋಪ ಮಾಡಿದ್ದಾರೆ. ಯಾವ ಯಾವ ಇಲಾಖೆಯಿಂದ ಎಷ್ಟೆಷ್ಟು ಖರ್ಚಾಗಿದೆ ಎಂದಿದ್ದಾರೆ. ಸಚಿವರು ಹೇಳಿದ ಲೆಕ್ಕವೆಷ್ಟು ಅನ್ನೋದನ್ನ ಸಿದ್ದರಾಮಯ್ಯನವರು ತಿಳಿಸಿದ್ದಾರೆ.

ಬಿಬಿಎಂಪಿ, ನಗರ, ಸ್ಥಳೀಯ ಸಂಸ್ಥೆಗಳಿಂದ 200 ಕೋಟಿ, ಕಾರ್ಮಿಕ ಇಲಾಖೆಯಿಂದ 1 ಸಾವಿರ ಕೋಟಿ, ವೈದ್ಯಕೀಯ ಶಿಕ್ಷಣ ಇಲಾಖೆ 815 ಕೋಟಿ, ಆರೋಗ್ಯ ಇಲಾಖೆ 700 ಕೋಟಿ, ಜಿಲ್ಲಾಡಳಿತಕ್ಕೆ ನೀಡಿರುವ ಎಸ್ ಡಿಆರ್ ಎಫ್ ಹಣ 742.32 ಕೋಟಿ, ವಿವಿಧ ಇಲಾಖೆಯಿಂದ 500 ಕೋಟಿ, ಕೋವಿಡ್ ಕೇಂದ್ರಗಳಿಗೆ ಹಾಸಿಗೆ ಖರೀದಿಗೆ 160 ಕೋಟಿ, ಕೇಂದ್ರ ಖರೀದಿಸಿ ನೀಡಿರುವ ಉಪಕರಣಗಳ ಮೌಲ್ಯ 50 ಕೋಟಿ ಎಂದು ಹೇಳಿದ್ದಾರೆ.

ಹೀಗೆ ಒಟ್ಟು 4,167 ಕೋಟಿ ರೂಪಾಯಿ ಖರ್ಚಾಗಿದೆ ಎಂದು ತಿಳಿದು ಬಂದಿದೆ ಅಂತಾ ಸಿದ್ದರಾಮಯ್ಯ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ. ಇದರಲ್ಲಿ 2 ಸಾವಿರ ಕೋಟಿ ರೂಪಾಯಿ ಅವ್ಯವಹಾರ ನಡೆದಿದೆ ಎಂದು ಆರೋಪಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!