ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಕೋವಿಡ್ ಸೋಂಕು ನಿರ್ವಹಣೆಗೆ ಸಂಬಂಧಿಸಿದಂತೆ ಗೃಹ ಕಚೇರಿ ಕೃಷ್ಣಾದಲ್ಲಿ ಸಿಎಂ ಬೊಮ್ಮಾಯಿ ಅಧ್ಯಕ್ಷತೆಯಲ್ಲಿ ಸಚಿವರು, ತಜ್ಞರು, ತಾಂತ್ರಿಕ ಸಲಹಾ ಸಮಿತಿ ಸದಸ್ಯರು ಸೇರಿ ಸಭೆ ನಡೆಸಿದರು. ಸಭೆಯಲ್ಲಿ ಪ್ರಮುಖ ವಿಚಾರಗಳನ್ನು ತೀರ್ಮಾನ ತೆಗೆದುಕೊಳ್ಳಲಾಗಿದೆ.
ಜನವರಿ 31ರಿಂದ ನೈಟ್ ಕರ್ಫ್ಯೂ ರದ್ದು ಮಾಡಲಾಗಿದೆ. ಬೆಂಗಳೂರಿನಲ್ಲಿ ಶಾಲೆಗಳು ಸೋಮವಾರದಿಂದ ಶುರುವಾಗಲಿದೆ. ಹೋಟೆಲ್, ಬಾರ್, ರೆಸ್ಟೋರೆಂಟ್ ಗಳಲ್ಲಿ ಪೂರ್ಣ ಪ್ರಮಾಣದಲ್ಲಿ ತೆರೆಯಲು ಅವಕಾಶ ನೀಡಲಾಗಿದೆ. ಮದುವೆಗೆ 200 ಜನರ ಬದಲು 300 ಜನರಿಗೆ ಅನುಮತಿ, ಸಿನಿಮಾ ಹಾಲ್ ಗಳಲ್ಲಿ 50:50 ಪರವಾನಿಗೆ.
ಇನ್ನು ದೇವಸ್ಥಾನಗಳಲ್ಲಿ ಸೇವೆ ಆರಂಭಿಸಲು ಅನುಮತಿ ನೀಡಲಾಗಿದೆ. ಸಾರಿಗೆ ವಿಚಾರದಲ್ಲಿ ಹಾಲಿ ನಿಯಮಗಳು ಮುಂದುವರೆಯಲಿವೆ. ಪ್ರತಿಭಟನೆ, ರ್ಯಾಲಿ, ಪಾದಯಾತ್ರೆಗೆ ಅವಕಾಶ ಇಲ್ಲ ಎಂದು ಕಂದಾಯ ಸಚಿವ ಆರ್.ಅಶೋಕ ತಿಳಿಸಿದ್ದಾರೆ.