ಪಿಎಂ ಹಾಗೂ ಸಿಎಂ ಪರಿಹಾರ ನಿಧಿಗೆ ನಟ, ಶಾಸಕ ದೇಣಿಗೆ

398

ನವದೆಹಲಿ/ಬೆಂಗಳೂರು: ಕರೋನಾ ಎಫೆಕ್ಟ್ ನಿಂದಾಗಿ ಆರ್ಥಿಕ ಪೆಟ್ಟು ಬಿದ್ದಿದೆ. ಹೀಗಾಗಿ ಸರ್ಕಾರಕ್ಕೂ ಸಾರ್ವಜನಿಕರು ಪರಿಹಾರ ನಿಧಿ ನೀಡಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಈ ನಿಟ್ಟಿನಲ್ಲಿ ಪಿಎಂ ಪರಿಹಾರ ನಿಧಿಗೆ ಟಾಲಿವುಡ್ ನಟ ಹಾಗೂ ಜನಸೇನಾ ಪಕ್ಷದ ಮುಖ್ಯಸ್ಥ ಪವನ ಕಲ್ಯಾಣ 1 ಕೋಟಿ ರೂಪಾಯಿ ನೀಡಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ಪಿಎಂ ಪರಿಹಾರ ನಿಧಿಗೆ 1 ಕೋಟಿ ಹಾಗೂ ತೆಲಂಗಾಣ ಮತ್ತು ಆಂಧ್ರ ಸಿಎಂ ಪರಿಹಾರ ನಿಧಿಗೆ ತಲಾ 50 ಲಕ್ಷ ರೂಪಾಯಿ ನೀಡುವುದಾಗಿ ಟ್ವೀಟ್ ಮಾಡಿದ್ದಾರೆ.

ಇನ್ನು ವಿಜಯಪುರ ನಗರ ಶಾಸಕ ಬಸವನಗೌಡ ಪಾಟೀಲ ಯತ್ನಾಳ, ತಮ್ಮ ಮೂರು ತಿಂಗಳ ವೇತನವನ್ನ ಸಿಎಂ ಪರಿಹಾರ ನಿಧಿಗೆ ನೀಡಿದ್ದಾರೆ. ಈ ಬಗ್ಗೆ ಸಿಎಂಗೆ ಪತ್ರ ಬರೆದಿರುವ ಶಾಸಕರು, ಕೋವಿಡ್ 19 ನಿಂದಾಗಿ ಆರ್ಥಿಕ ನಷ್ಟ ಎದುರಿಸಬೇಕಿದೆ. ಈ ಸಂದರ್ಭದಲ್ಲಿ ಸರ್ಕಾರದ ಜೊತೆಗೆ ನೈತಿಕವಾಗಿ ಹಾಗೂ ಆರ್ಥಿಕ ಬೆಂಬಲ ನೀಡಬೇಕಾಗಿದೆ. ಹೀಗಾಗಿ ಶಾಸಕರಿಗೆ ಮಾಸಿಕವಾಗಿ ನೀಡುವ ವೇತನದಲ್ಲಿ ಮೂರು ತಿಂಗಳು ವೇತನ ನೀಡುವುದಾಗಿ ತಿಳಿಸಿದ್ದಾರೆ.




Leave a Reply

Your email address will not be published. Required fields are marked *

error: Content is protected !!