ಪ್ರಜಾಸ್ತ್ರ ಸುದ್ದಿ
ಧಾರವಾಡ: ನಾಡಿನ ಖ್ಯಾತ ಕವಿ ಚನ್ನವೀರ ಕಣವಿ ಅವರಿಗೆ ಕೋವಿಡ್ ಸೋಂಕು ದೃಢಪಟ್ಟಿರುವುದರಿಂದ ಕಳೆದ ಶುಕ್ರವಾರದಿಂದ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರ ಆರೋಗ್ಯದ ಬಗ್ಗೆ ಜಿಲ್ಲಾಡಳಿತ ಸೇರಿದಂತೆ ಅಧಿಕಾರಿಗಳ ತಂಡ ಸೂಕ್ತ ನಿಗಾವಹಿಸಿದೆ.
ಐಸಿಯುನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ಇನ್ನೆರಡು ದಿನಗಳಲ್ಲಿ ಅವರನ್ನು ಡಿಸ್ಚಾರ್ಜ್ ಮಾಡಲಾಗುವುದು ಎಂದು ತಿಳಿದು ಬಂದಿದೆ. ಹೀಗಾಗಿ ಯಾರೂ ಗಾಬರಿ ಪಡುವ ಅಗತ್ಯವಿಲ್ಲವೆಂದು ತಿಳಿಸಲಾಗಿದೆ.