ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ರಾಜ್ಯದಲ್ಲಿ ಕರೋನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕ್ವಾರಂಟೈನ್ ನಿಯಮದಲ್ಲಿ ರಾಜ್ಯ ಸರ್ಕಾರ ಒಂದಿಷ್ಟು ಬದಲಾವಣೆ ಮಾಡಿದೆ. ಈ ಬಗ್ಗೆ ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ ಟ್ವೀಟ್ ಮೂಲಕ ತಿಳಿಸಿದ್ದಾರೆ.
ಇನ್ನು ಮುಂದೆ ಮಹಾರಾಷ್ಟ್ರಿಂದ ಬರುವವರಿಗೆ 7 ದಿನ ಸಂಸ್ಥಾ ಕ್ವಾರಂಟೈನ್ ಹಾಗೂ 7 ದಿನ ಹೋಂ ಕ್ವಾರಂಟೈನ್ ಹಾಗೂ ಇತರೆ ರಾಜ್ಯಗಳಿಂದ ಆಗಮಿಸುವವರಿಗೆ 14 ದಿನಗಳ ಕಾಲ ಹೋಂ ಕ್ವಾರಂಟೈನ್ ಮಾಡಲಾಗುವುದು ಎಂದು ತಿಳಿಸಿದ್ದಾರೆ.