ಕರೋನಾ ಹೋರಾಟಕ್ಕೆ ಸಂಬಂಧಿಸಿದಂತೆ ಸಿನ್ಮಾ ನಟರು ಸಹ ಸಹಾಯ ಹಸ್ತ ಚಾಚಿದ್ದಾರೆ. ಅವರವರ ರಾಜ್ಯಗಳ ಸಿಎಂ ಪರಿಹಾರ ನಿಧಿ ಹಾಗೂ ಪ್ರಧಾನಿ ಕೇರ್ಸ್ ಗೆ ಲಕ್ಷದಿಂದ ಹಿಡಿದು ಕೋಟಿ ಕೋಟಿ ರೂಪಾಯಿಯಲ್ಲಿ ದೇಣಿಗೆ ನೀಡಿದ್ದಾರೆ. ಅದೇ ರೀತಿ ನಟ ದಳಪತಿ ವಿಜಯ ಸಹ ನೀಡಿದ್ದಾರೆ.
ಇದೀಗ ನಟ ವಿಜಯ, ದಕ್ಷಿಣ ಭಾರತ ಸಿನ್ಮಾ ಕಾರ್ಮಿಕರ ಸಂಘಕ್ಕೆ 25 ಲಕ್ಷ ರೂಪಾಯಿ ದೇಣಿಗೆ ನೀಡಿದ್ದಾರೆ. ಪಿಎಂ ಕೇರ್ಸ್ ಗೆ 25 ಲಕ್ಷ ರೂಪಾಯಿ, ತವರು ರಾಜ್ಯ ತಮಿಳುನಾಡಿಗೆ 50 ಲಕ್ಷ ರೂಪಾಯಿ ದೇಣಿಗೆ ನೀಡಿದ್ದಾರೆ. ಇದರ ಜೊತೆಗೆ ವಿವಿಧ ರಾಜ್ಯಗಳಿಗೂ ವಿಜಯ ದೇಣಿಗೆ ನೀಡಿದ್ದಾರೆ.
ಇನ್ನು ಕೇರಳಕ್ಕೆ 10 ಲಕ್ಷ ರೂಪಾಯಿ, ಕರ್ನಾಟಕ, ಆಂಧ್ರಪ್ರದೇಶ, ತೆಲಂಗಾಣಕ್ಕೆ ತಲಾ 5 ಲಕ್ಷ ರೂಪಾಯಿ ದೇಣಿಗೆ ನೀಡಿದ್ದಾರೆ. ಕೇಂದ್ರಾಡಳಿತ ಪ್ರದೇಶ ಪುದುಚೇರಿ 5 ಲಕ್ಷ ರೂಪಾಯಿ ದೇಣಿಗೆ ನೀಡಿದ್ದಾರೆ. ಈ ಮೂಲಕ 1.30 ಕೋಟಿ ರೂಪಾಯಿ ದೇಣಿಗೆ ನೀಡಿ ಮಾನವೀಯತೆ ಮೆರದಿದ್ದಾರೆ.