ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಕೋವಿಡ್ 19 ರೂಪಾಂತರ ಓಮಿಕ್ರಾನ್ ಸೋಂಕು ಹಿನ್ನೆಲೆಯಲ್ಲಿ ಸಿಲಿಕಾನ್ ಸಿಟಿಯಲ್ಲಿ ಶಾಲಾ, ಕಾಲೇಜುಗಳನ್ನು ಬಂದ್ ಮಾಡಲಾಗಿದೆ. ಆದರೆ, ಇದು ಎಲ್ಲೆಡೆ ಮುಂದುವರೆಯುತ್ತಾ ಅನ್ನೋ ಆತಂಕ ಶುರುವಾಗಿದೆ. ಈ ಬಗ್ಗೆ ಶಿಕ್ಷಣ ಸಚಿವ ಬಿ.ಸಿ ನಾಗೇಶ್ ಸ್ಪಷ್ಟಪಡಿಸಿದ್ದಾರೆ.
ಶಾಲೆಗಳಲ್ಲಿ ಸೋಂಕು ಹೆಚ್ಚುತ್ತಿರುವ ಬಗ್ಗೆ ಯಾವುದೇ ವರದಿ ಇಲ್ಲ. ಆದರಿಂದ ಶಾಲೆಗಳನ್ನು ಮುಚ್ಚುವ ಪ್ರಸ್ತಾಪವಿಲ್ಲ. ಬೆಂಗಳೂರಿನಲ್ಲಿ ಸೋಂಕು ಹೆಚ್ಚಾಗುತ್ತಿರುವುದರಿಂದ ಇಲ್ಲಿ ಕೆಲ ದಿನಗಳ ಕಾಲ ಮುಚ್ಚಲಾಗಿದೆ. ಆದರೆ, ಇದು ರಾಜ್ಯದ ತುಂಬ ಇರಲ್ಲ. ಸ್ಕೂಲ್ ನಲ್ಲಿ ಸೋಂಕು ಕಂಡು ಬಂದರೆ ಆ ಶಾಲೆಯನ್ನು ಮಾತ್ರ ನಾಲ್ಕು ದಿನ ಬಂದ್ ಮಾಡಲಾಗುವುದು ಎಂದು ತಿಳಿಸಿದ್ದಾರೆ.