ಬೆಂಗಳೂರು: ಕುರುನಾಡಿನಲ್ಲಿ ಇಂದು ಮತ್ತೆ 7 ಜನ ಸೋಂಕಿತರು ಪತ್ತೆಯಾಗಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 62ಕ್ಕೆ ಏರಿಕೆಯಾಗಿದೆ. ಈ ಬಗ್ಗೆ ಆರೋಗ್ಯ ಇಲಾಖೆ ಅಧಿಕೃತವಾಗಿ ಮಾಹಿತಿ ಬಿಡುಗಡೆ ಮಾಡಿದೆ.
ಆರೋಗ್ಯ ಇಲಾಖೆ ಬಿಡುಗಡೆ ಮಾಡಿರುವ ಹೆಲ್ತ್ ಬುಲೆಟಿನ್ ನಲ್ಲಿ ಇಂದು 7 ಜನರಲ್ಲಿ ಸೋಂಕು ಪತ್ತೆಯಾಗಿದೆ. ಸಾವಿನ ಸಂಖ್ಯೆ 3ಕ್ಕೆ ಏರಿದೆ. 5 ಜನ ಸೋಂಕಿನಿಂದ ಪೂರ್ತಿ ಗುಣಮುಖರಾಗಿದ್ದಾರೆ ಎಂದು ತಿಳಿಸಲಾಗಿದೆ.
ದಕ್ಷಿಣ ಕನ್ನಡದಲ್ಲಿ 10 ತಿಂಗಳ ಮಗುವಿಗೆ ಕರೋನಾ ಸೋಂಕು ದೃಢಪಟ್ಟಿದೆ. ಉತ್ತರ ಕನ್ನಡದಲ್ಲಿ 22 ವರ್ಷದ ಯುವಕನಿಗೆ, ಬೆಂಗಳೂರಿನಲ್ಲಿ 20 ಹಾಗೂ 25 ವರ್ಷದ ಯುವಕರಿಬ್ಬರು, 35 ಹಾಗೂ 33 ವರ್ಷದ ಮಹಿಳೆಯರಿಬ್ಬರಲ್ಲಿ ಕರೋನಾ ಸೋಂಕು ತಗುಲಿದೆ ಎಂದು ತಿಳಿಸಿದ್ದಾರೆ. ಇನ್ನು ವಿಜಯಪುರ ಜಿಲ್ಲೆಯಲ್ಲಿ ಪಾಸಿಟಿವ್ ಬಂದಿದೆ ಅನ್ನೋ ವಂದತಿ ಹಬ್ಬಿದೆ. ಜಿಲ್ಲಾಧಿಕಾರಿ ಈ ಬಗ್ಗೆ ಇದುವರೆಗೂ ಯಾವುದೇ ಸ್ಪಷ್ಟನೆ ನೀಡಿಲ್ಲ. ಹೀಗಾಗಿ ಸಾರ್ವಜನಿಕರು ಸುಳ್ಳು ಸುದ್ದಿ ಹಬ್ಬಿಸಿ ಶಿಕ್ಷೆ ಅನುಭವಿಸಬೇಡಿ.