ಪ್ರಜಾಸ್ತ್ರ ಸುದ್ದಿ
ನವದೆಹಲಿ: ದೆಹಲಿ ನಿವಾಸಿಗಳಿಗೆ ಮಾತ್ರ ಕರೋನಾ ಚಿಕಿತ್ಸೆ ಎಂದಿರುವ ಸಿಎಂ ಅರವಿಂದ ಕೇಜ್ರಿವಾಲ್ ಅವರ ಆದೇಶಕ್ಕೆ ಲೆಫ್ಟಿನೆಂಟ್ ಗವರ್ನರ್ ಬ್ರೇಕ್ ಹಾಕಿದ್ದಾರೆ. ದೆಹಲಿ ನಿವಾಸಿಗಳು ಅಲ್ಲ ಅನ್ನೋ ಕಾರಣಕ್ಕೆ ಚಿಕಿತ್ಸೆ ನಿರಾಕರಿಸಬಾರದು ಎಂದಿದ್ದಾರೆ.
ದೆಹಲಿ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಸಹ ಆಗಿರುವ ಲೆಫ್ಟಿನೆಂಟ್ ಗವರ್ನರ್ ಅನಿಲ ಬೈಜಲ್, ದೆಹಲಿಯಿಂದ ಹೊರತಾದವರು ಸಹ ಚಿಕಿತ್ಸೆ ಪಡೆಯಬಹುದು ಎಂದಿದ್ದಾರೆ. ಈ ಮೂಲಕ ಸಿಎಂ ಕೇಜ್ರಿವಾಲ್ ಆದೇಶಕ್ಕೆ ತಡೆ ನೀಡಿದ್ದಾರೆ.