ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕರೋನಾ ಸ್ಥಿತಿ ಕೈ ಮೀರಿದೆ. ಹೀಗಾಗಿ ಇನ್ನಷ್ಟು ಕಠಿಣ ಕ್ರಮ ಕೈಗೊಳ್ಳಬೇಕಾದ ಅನಿವಾರ್ಯತೆಯಿದೆ ಎಂದು ಆರೋಗ್ಯ ಸಚಿವ ಡಾ.ಕೆ ಸುಧಾಕರ ಹೇಳಿದ್ದಾರೆ. ಕೋವಿಡ್ ಸೋಂಕು ಸಮುದಾಯಕ್ಕೆ ಹರಡಿದೆ. ಈ ಬಗ್ಗೆ ಕೇಂದ್ರ ಸರ್ಕಾರ ಸಹ ಹೇಳಿದೆ ಎಂದಿದ್ದಾರೆ.
ಸೋಮವಾರ ಕಂದಾಯ ಸಚಿವ ಆರ್.ಅಶೋಕ ಅಧ್ಯಕ್ಷತೆಯಲ್ಲಿ ಸಭೆ ನಡೆಯಲಿದೆ. ಸಭೆಯಲ್ಲಿ ಬೆಂಗಳೂರಿನಲ್ಲಿ ತೆಗೆದುಕೊಳ್ಳಬೇಕಾದ ಕಠಿಣ ಕ್ರಮಗಳ ಕುರಿತು ಚರ್ಚೆ ನಡೆಸಲಾಗುತ್ತೆ ಎಂದು ತಿಳಿಸಿದ್ದಾರೆ.