ಕೋವಿಡ್ 4ನೇ ಅಲೆ, ಆರಂಭದಲ್ಲೇ ಎಚ್ಚರ: ಪ್ರಧಾನಿ

406

ಪ್ರಜಾಸ್ತ್ರ ಸುದ್ದಿ

ನವದೆಹಲಿ: ಕೋವಿಡ್ 4ನೇ ಅಲೆ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರಗಳೊಂದಿಗೆ ಬುಧವಾರ ಪ್ರಧಾನಿ ಮೋದಿ ಮಾತುಕತೆ ನಡೆಸಿದರು. ಮುಖ್ಯಮಂತ್ರಿಗಳೊಂದಿಗೆ ವಿಡಿಯೋ ಕಾನ್ಫ್ ರೆನ್ಸ್ ಮೂಲಕ ಮಾತನಾಡಿದ ಪ್ರಧಾನಿ, ಕೋವಿಡ್ 4ನೇ ಅಲೆ ಬಗ್ಗೆ ಆರಂಭದಲ್ಲೇ ಎಚ್ಚರಿಕೆ ಇರಲಿ. ಅದನ್ನು ಕಡಿವಾಣ ಹಾಕಲು ಸಜ್ಜಾಗಿ ಎಂದರು.

ಕೋವಿಡ್ ನಿಂದ ಪಾರಾಗಲು ಲಸಿಕೆ ಉತ್ತಮ ಮಾರ್ಗ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಸಹಕಾರೊಂದಿಗೆ ಆರೋಗ್ಯ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿಯಾಗಿದೆ. ಪಾಸಿಟಿವಿಟಿ ಬಂದ ವರದಿಗಳನ್ನು ಲ್ಯಾಬ್ ಗೆ ಕಳಿಸಿ ಮತ್ತಷ್ಟು ಪರಿಶೀಲನೆ ನಡೆಸಬೇಕು ಎಂದು ಹೇಳಿದರು.

ಪ್ರಧಾನಿಯೊಂದಗಿನ ಸಭೆಯಲ್ಲಿ ಕರ್ನಾಟಕ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಆರೋಗ್ಯ ಸಚಿವ ಡಾ.ಕೆ ಸುಧಾಕರ್, ವಸತಿ ಸಚಿವ ವಿ.ಸೋಮಣ್ಣ, ಮುಖ್ಯಕಾರ್ಯದರ್ಶಿ ಪಿ.ರವಿಕುಮಾರ್ ಭಾಗವಹಿಸಿದ್ದರು.




Leave a Reply

Your email address will not be published. Required fields are marked *

error: Content is protected !!