ಪ್ರಜಾಸ್ತ್ರ ಸುದ್ದಿ
ವಿಜಯಪುರ: ಮಾಜಿ ಸಚಿವ, ಬಬಲೇಶ್ವರ ವಿಧಾನಸಭಾ ಕ್ಷೇತ್ರದ ಶಾಸಕ ಎಂ.ಬಿ ಪಾಟೀಲ, ತಮ್ಮ ಕ್ಷೇತ್ರದಲ್ಲಿ ಎರಡು ಕೋವಿಡ್ ಕೇಂದ್ರಗಳನ್ನ ಪ್ರಾರಂಭಿಸಲಾಗುವುದು ಎಂದಿದ್ದಾರೆ. ತಿಕೋಟಾ ಹಾಗೂ ಕಾರಜೋಳದಲ್ಲಿ ಕೋವಿಡ್ ಕೇರ್ ಸೆಂಟ್ ತೆರೆಯುವುದಾಗಿ ತಿಳಿಸಿದ್ದಾರೆ.
ಕಾರಜೋಳ ಗ್ರಾಮದ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ಹಾಗೂ ತಿಕೋಟಾದ ಬಿಸಿಎಂ ವಸತಿ ನಿಲಯ, ಬಿಎಲ್ ಡಿಇ ಸಂಸ್ಥೆಯ ವಸತಿ ನಿಲಯದಲ್ಲಿ ಕೋವಿಡ್ ಕೇರ್ ಸೆಂಟರ್ ಸ್ಥಾಪಿಸಲು ತಾಲೂಕು ಆಡಳಿತದ ಸೂಕ್ತ ಕ್ರಮಗಳನ್ನ ತೆಗೆದುಕೊಳ್ಳಲಾಗುವುದು ಎಂದಿದ್ದಾರೆ.
ಸಮುದಾಯ ಭವನಗಳು, ಶಾಲೆಗಳು, ಬೃಹತ್ ಕಟ್ಟಡಗಳು, ಗೋದಾಮುಗಳನ್ನ ಹೊಂದಿದವರು ಸ್ವಯಂ ಪ್ರೇರಿತವಾಗಿ ಮುಂದೆ ಬಂದು, ಕೋವಿಡ್ ಸೆಂಟರ್ ತೆರೆಯಲು ಅವಕಾಶ ನೀಡಬೇಕು ಎಂದು ಎಂ.ಬಿ ಪಾಟೀಲ ಮನವಿ ಮಾಡಿದ್ದಾರೆ.