ಕವಿವಿ ಕ್ಯಾಂಪಸ್ ನಲ್ಲಿ ಕೋವಿಡ್ ಲಸಿಕೆ ಅಭಿಯಾನ

250

ಪ್ರಜಾಸ್ತ್ರ ಸುದ್ದಿ

ಧಾರವಾಡ: ಜಿಲ್ಲಾ ಆರೋಗ್ಯ ಇಲಾಖೆಯ ಸಹಯೋಗದೊಂದಿಗೆ ಕರ್ನಾಟಕ ವಿಶ್ವವಿದ್ಯಾಲಯದ ಗಾಂಧಿ ಭವನದಲ್ಲಿ ಕೋವಿಡ್-19 ಲಸಿಕಾ ಅಭಿಯಾನ ನಡೆಸಲಾಯ್ತು.

ಕರ್ನಾಟಕ ವಿಶ್ವವಿದ್ಯಾಲಯ ಮತ್ತು ಸಂಯೋಜಿತ ಕಾಲೇಜುಗಳ ವಿದ್ಯಾರ್ಥಿ ಮತ್ತು ಸಿಬ್ಬಂದಿ ವರ್ಗದವರಿಗೆ ಮೂರು ಹಂತಗಳಲ್ಲಿ ಕೋವಿಡ್-19 ಲಸಿಕೆಯನ್ನು ನೀಡಲಾಯಿತು. ಈ ವೇಳೆ ಸುಮಾರು 1,700 ವಿದ್ಯಾರ್ಥಿಗಳು ಮತ್ತು ಸಿಬ್ಬಂದಿ ಲಸಿಕೆ ಪಡೆದುಕೊಂಡರು.

ಲಸಿಕೆ ಅಭಿಯಾನದಲ್ಲಿ ಕುಲಪತಿ ಪ್ರೊ.ಕೆ.ಬಿ.ಗುಡಸಿ, ಕುಲಸಚಿವರಾದ ಡಾ.ಕೆ.ಟಿ.ಹನುಂತಪ್ಪ, ಕವಿವಿಯ ಕೋವಿಡ್ ಸೆಲ್‌ ನೋಡಲ್ ಅಧಿಕಾರಿಗಳಾದ ಪ್ರೊ ವೇದಮೂರ್ತಿ, ಪ್ರೊ.ಹನುಮಗೌಡ, ವಿದ್ಯಾರ್ಥಿ ಕಲ್ಯಾಣ ಅಧಿಕಾರಿ ಡಾ.ಎಸ್.ಕೆ ಪವಾರ್, ಎನ್.ಎಸ್.ಎಸ್ ಕೋಶದ ಸಂಯೋಜಕರಾದ ಡಾ.ಎಂ.ಬಿ ದಳಪತಿ, ವೈದ್ಯಾಧಿಕಾರಿಗಳಾದ ಡಾ.ಎಲೆದಳ್ಳಿ, ಡಾ.ಮುತಾಲಿಕ ದೇಸಾಯಿ, ಡಾ.ಗಾಯತ್ರಿ,  ಡಾ.ತನುಜಾ ಸೇರಿದಂತೆ ಹಲವರು ಭಾಗವಹಿಸಿದ್ರು.




Leave a Reply

Your email address will not be published. Required fields are marked *

error: Content is protected !!