ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ರಾಜ್ಯದಲ್ಲಿ ಇದೀಗ ಮತ್ತೆ ಕೋವಿಡ್ ಸೋಂಕಿನ ಕಾಟ ಶುರುವಾಗಿದೆ. ಜನರ ಜೀವ, ಜೀವನ ಕಸೆದುಕೊಂಡಿದ್ದ ಮಹಾಮಾರಿ ಮತ್ತೊಮ್ಮೆ ಆಗಮಿಸಿದೆ. ಕರೋನಾ ಸೋಂಕಿನಿಂದ ಮೂವರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ನಿನ್ನೆ ಹೊಸದಾಗಿ 22 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 92ಕ್ಕೆ ಏರಿಕೆಯಾಗಿದೆ. ಸೋಂಕು ವೇಗವಾಗಿ ಹರಡುತ್ತಿದ್ದರೂ ಅದು ಅಪಾಯಕಾರಿ ಅಲ್ಲ. ಆದರೆ ಎಚ್ಚರಿಕೆಯಿಂದ ಇರಬೇಕೆಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ.