ಪ್ರಜಾಸ್ತ್ರ ಸುದ್ದಿ
ಬೆಂಗಳೂರು: ಮಾಜಿ ಸಚಿವ, ವಿಧಾನ ಪರಿಷತ್ ಸದಸ್ಯ ಸಿ.ಪಿ ಯೋಗೇಶ್ವರ್ ಅವರ ಭಾವನ ಕೊಲೆ ಆರೋಪಿಯನ್ನು ಬಂಧಿಸಲಾಗಿದೆ. ಮುರುಗನ್ ಬಂಧಿತ ಆರೋಪಿ. ತಮಿಳುನಾಡಿನಲ್ಲಿ ಇತನನ್ನು ಬಂಧಿಸಲಾಗಿದೆ.
ಈ ಪ್ರಕರಣದಲ್ಲಿನ ಇನ್ನಿಬ್ಬರು ತಲೆ ಮರೆಸಿಕೊಂಡಿದ್ದಾರೆ. ಅವರ ಪತ್ತೆಗಾಗಿ ಕಾರ್ಯಾಚರಣೆ ನಡೆಯುತ್ತಿದೆ. ಆರೋಪಿಯನ್ನು ತಮಿಳುನಾಡಿನಿಂದ ಕರೆದುಕೊಂಡು ಬರಲಾಗುತ್ತಿದೆ. ತಮಿಳುನಾಡು ಮೂಲದ ಮುರುಗನ್ ಕೆಲ ವರ್ಷಗಳಿಂದ ಕೊಲೆಯಾದ ಮಹದೇವಯ್ಯ ಅವರ ಪಕ್ಕದ ತೋಟದಲ್ಲಿ ಕೆಲಸ ಮಾಡುತ್ತಿದ್ದ. ಅವರ ಹಣಕಾಸಿನ ವ್ಯವಹಾರ ತಿಳಿದುಕೊಂಡು, ಈ ಕೃತ್ಯವೆಸಗಲಾಗಿದೆ ಎನ್ನಲಾಗುತ್ತಿದೆ.