ಕಲ್ಪತರು ನಾಡಲ್ಲಿ ಮತ್ತೆ ರೌಡಿಗಳ ಅಟ್ಟಹಾಸ

368

ತುಮಕೂರು: ನಗರದಲ್ಲಿ ರೌಡಿಗಳ ಅಟ್ಟಹಾಸಕ್ಕೆ ಓರ್ವ ಬಲಿಯಾಗಿದ್ದಾನೆ. 30 ವರ್ಷದ ಮಹಾಂತೇಶ ಮೃತ ದುರ್ದೈವಿ. ಘಟನೆಯಲ್ಲಿ ಇನ್ನೋರ್ವ ಮಂಜುನಾಥ ಎಂಬಾತನಿಗೆ ಗಂಭೀರ ಗಾಯಗಳಾಗಿವೆ.

ತುಮಕೂರಿನ ಶಿರಾ ಗೇಟ್ ನಾಗಣ್ಯಪಾಳ್ಯದ ಹತ್ತಿರ ಈ ಘಟನೆ ನಡೆದಿದೆ. ಹಲ್ಲೆ ನಡೆಸಿದ ದುಷ್ಕರ್ಮಿಗಳು ಎಸ್ಕೇಪ್ ಆಗಿದ್ದಾರೆ. ಘಟನೆ ವೇಳೆ ಹಲ್ಲೆಗೆ ಒಳಗಾಗಿದ್ದ ಮಹಾಂತೇಶ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾನೆ. ನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಯಾವ ಕಾರಣಕ್ಕೆ ಈ ಕೃತ್ಯ ನಡೆದಿದೆ ಅನ್ನೋದರ ಮಾಹಿತಿ ಲಭ್ಯವಾಗಿಲ್ಲ.

ಒಂದು ವಾರದಲ್ಲಿ ಇದು ನಾಲ್ಕನೇ ಪ್ರಕರಣವಾಗಿದೆ. ಇದ್ರಿಂದಾಗಿ ಜನರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದ್ದು, ಅಪರಾಧಿ ಕೃತ್ಯ ಮಟ್ಟಹಾಕುವಲ್ಲಿ ಪೊಲೀಸ್ರು ವಿಫಲರಾಗಿದ್ದಾರೆ ಎಂದು ಸಾರ್ವಜನಿಕರು ಮಾತ್ನಾಡಿಕೊಳ್ತಿದ್ದಾರೆ.




Leave a Reply

Your email address will not be published. Required fields are marked *

error: Content is protected !!