ಪ್ರಜಾಸ್ತ್ರ ಸುದ್ದಿ
ರಾಯಚೂರು: 9 ವರ್ಷದ ಬಾಲಕನ ಮೇಲೆ ಮೊಸಳೆ ದಾಳಿ ನಡೆಸಿದ ಘಟನೆ ತಾಲೂಕಿನ ಕೊರ್ತಕುಂದ ಗ್ರಾಮದಲ್ಲಿ ನಡೆದಿದೆ. ಬಾಲಕನ್ನು ಸ್ಥಳೀಯರು ರಕ್ಷಿಸಿದ್ದು, ಎಲ್ಲರೂ ನಿಟ್ಟುಸಿರು ಬಿಡುವಂತಾಗಿದೆ.
ಜಾತ್ರೆ ಹಿನ್ನೆಲೆಯಲ್ಲಿ ಕುಟುಂಬಸ್ಥರೊಂದಿಗೆ 9 ವರ್ಷದ ಪವನ್ ಅಜ್ಜಿಯ ಮನೆಗೆ ಬಂದಿದ್ದ. ಕುಟುಂಬಸ್ಥರು ನದಿಗೆ ಹೋಗಿದ್ದ ಸಂದರ್ಭದಲ್ಲಿ ಮೊಸಳೆ ದಾಳಿ ಮಾಡಿದೆ. ಕೂಡಲೇ ಸ್ಥಳೀಯರು ರಕ್ಷಣೆಗೆ ಬಂದು ಬಾಲಕನನ್ನು ಕಾಪಾಡಿದ್ದಾರೆ. ಬಾಲಕನ್ನು ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.