ಪ್ರಜಾಸ್ತ್ರ ಸುದ್ದಿ
ನವದೆಹಲಿ: ನೆರೆಯಿಂದಾಗಿ ಬೆಳೆಹಾನಿಗೆ ಒಳಗಾದ ಕರ್ನಾಟಕ ಹಾಗೂ ಮಹಾರಾಷ್ಟ್ರಕ್ಕೆ ಕೇಂದ್ರ ಸರ್ಕಾರದಿಂದ ಪರಿಹಾರ ಘೋಷಿಸಲಾಗಿದೆ. 2020ರಲ್ಲಿ ಅತಿವೃಷ್ಟಿಯಿಂದ ಉಂಟಾದ ಬೆಳೆಹಾನಿಗಾಗಿ ಎಸ್ ಡಿಆರ್ ಎಫ್ ಅಡಿಯಲ್ಲಿ ಕರ್ನಾಟಕ್ಕೆ 629.03 ಕೋಟಿ ಹಾಗೂ ಮಹಾರಾಷ್ಟ್ರಕ್ಕೆ 701 ಕೋಟಿ ಪರಿಹಾರ ಘೋಷಿಸಲಾಗಿದೆ.
ಈ ಬಗ್ಗೆ ಕೇಂದ್ರ ಕೃಷಿ ಮತ್ತು ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಲೋಕಸಭೆಯ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ್ರು. ಈ ಮೂಲಕ ಕೇಂದ್ರದಿಂದ ರಾಜ್ಯಕ್ಕೆ ಒಂದಿಷ್ಟು ಪರಿಹಾರ ನೀಡಲಾಗಿದೆ.