ರಾಮನಗರ: ದೇಶದ ಪ್ರಮುಖ ನಗರಗಳಲ್ಲಿ ಉಗ್ರರು ದಾಳಿ ನಡೆಸಲು ಪ್ಲಾನ್ ಮಾಡಿರುವ ಮಾಹಿತಿ ಮೇರೆಗೆ, ಎಲ್ಲೆಡೆ ಕಟ್ಟೆಚ್ಚರ ವಹಿಸಲಾಗಿದೆ. ದೇಶದ ಮಹಾನಗರಗಳಲ್ಲಿ ಹೈಅಲರ್ಟ್ ಘೋಷಣೆ ಮಾಡಲಾಗಿದೆ. ಇದರ ನಡುವೆ ರಾಮನಗರದಲ್ಲಿ ಎರಡು ಕಚ್ಚಾ ಬಾಂಬ್ ಗಳು ಪತ್ತೆಯಾಗಿವೆ.
ನಗರದ ರಾಮಗಢ ಹೋಟೆಲ್ ವೊಂದರ ಬಳಿ ಎರಡು ಕಚ್ಚಾ ಬಾಂಬ್ ಪತ್ತೆಯಾಗಿದ್ದು, ಸ್ಥಳೀಯರಲ್ಲಿ ಆತಂಕ ಮನೆ ಮಾಡಿದೆ. ಉಗ್ರರು ದಕ್ಷಿಣ ಭಾರತವನ್ನ ಸಹ ಟಾರ್ಗೆಟ್ ಮಾಡಿದ್ದಾರೆ. ಹೀಗಾಗಿ ಕಚ್ಚಾ ಬಾಂಬ್ ಪತ್ತೆಯಿಂದ ಜನರಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ.
ಸ್ಥಳಕ್ಕೆ ಐಜೂರು ಠಾಣೆ ಪೊಲೀಸ್ರು ಆಗಮಿಸಿದ್ದು ಪರಿಶೀಲನೆ ನಡೆಸಿದ್ದಾರೆ. ಶ್ವಾನದಳ ಸಹ ಆಗಮಿಸಿದ್ದು ಪರಿಶೀಲನೆ ಕಾರ್ಯ ನಡೆದಿದೆ.
ಸಾಂದರ್ಭಿಕ ಚಿತ್ರ ಬಳಸಲಾಗಿದೆ