ಪ್ರಜಾಸ್ತ್ರ ಸುದ್ದಿ
ಬೆಳಗಾವಿ: ಚಾಲಕನ ನಿಯಂತ್ರಣ ತಪ್ಪಿ ಕ್ರೂಸರ್ ಪಲ್ಟಿಯಾದ ಪರಿಣಾಮ 7 ಕಾರ್ಮಿಕರು ಮೃತಪಟ್ಟ ಘಟನೆ ಕಣಬರಗಿ ಹತ್ತಿರ ನಡೆದಿದೆ. ಈ ಘಟನೆ ಸಂಬಂಧ ಬೆಳಗಾವಿಯಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ಮೃತರ ಕುಟುಂಬಗಳಿಗೆ ತಲಾ 5 ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ.
ಮೃತರೆಲ್ಲರು ಗೋಕಾಕ ತಾಲೂಕಿನ ಅಕ್ಕಿತಂಗಿಹಾಳ್ಳ ಗ್ರಾಮದವರಾಗಿದ್ದಾರೆ. ಕ್ರೂಸರ್ ನಲ್ಲಿ 18 ಜನರಿದ್ದರು. ಮೂವರ ಸ್ಥಿತಿ ಗಂಭೀರವಾಗಿದ್ದು, ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮಾರಿಹಾಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.